ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021
ಜಿಲ್ಲಾ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಸೂಚನೆಗಳನ್ನು ಪಾಲಿಸದ ಮೂವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ (ಸಿಇಓ) ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಯಾರನ್ನೆಲ್ಲ ಅಮಾನತು ಮಾಡಲಾಗಿದೆ?
ಭದ್ರಾವತಿ ತಾಲೂಕು ಕಾಗೆಕೋಡಮಗ್ಗಿ ಗ್ರಾಮ ಪಂಚಾಯಿತಿ ಪಿಡಿಒ ಡಿ.ಶ್ರೀಧರ್ ನಾಯ್ಕ್.
ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಪ್ರಭಾರ ಅಭವೃದ್ಧಿ ಅಧಿಕಾರಿ ಸತೀಶ್ ಗೌಡ,
ಕಂಬದಾಳ ಹೊಸೂರು ಗ್ರಾಮ ಪಂಚಾಯಿತಿ ಪಿಡಿಒ ಅಹಮ್ಮದ್ ಅಲಿ.
ಅಮಾನತು ಮಾಡಲು ಕಾರಣವೇನು?
ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅವರ ನೇತೃತ್ವದಲ್ಲಿ, ಮಂಗಳವಾರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ವೇಳೆ, ಮೂವರು ಪಿಡಿಒಗಳನ್ನು ಸೂಚನೆಗಳನ್ನು ಸರಿಯಾಗಿ ಪಾಲಿಸದೆ ಇರುವುದು ತಿಳಿದು ಬಂದಿತ್ತು. ಹಾಗಾಗಿ ಮೂವರನ್ನು ಅಮಾನತು ಮಾಡಿ, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅವರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200