ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ (Protest) ನಡೆಯಿತು. ಬಿಜೆಪಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಹತ್ಯೆಯನ್ನು ಖಂಡಿಸಿದರು.
ಎಲ್ಲೆಲ್ಲಿ ಪ್ರತಿಭಟನೆ ನಡೆಯಿತು?
ಶಿವಮೊಗ್ಗ: ಬಿಜೆಪಿ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಸುಹಾಸ್ ಶೆಟ್ಟಿಯ ಹತ್ಯೆಗೈದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ: ಶುಕ್ರವಾರ ರಾತ್ರಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಮೌನಾಚರಣೆ ಮಾಡಿ ಪ್ರತಿಭಟನೆ ನಡೆಸಲಾಯಿತು. ಶಾಸಕ ಎಸ್.ಎನ್.ಚನ್ನಬಸಪ್ಪ, ವಿ.ಹೆಚ್.ಪಿ ಜಿಲ್ಲಾಧ್ಯಕ್ಷ ವಾಸುದೇವ್ ಸೇರಿ ಹಲವರು ಭಾಗಿಯಾಗಿದ್ದರು.
ತೀರ್ಥಹಳ್ಳಿ: ಪಟ್ಟಣದಲ್ಲಿ ಶುಕ್ರವಾರ ಸಂಜೆ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ ಕಾಂಗ್ರಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುಹಾಸ್ ಶೆಟ್ಟಿ ರೌಡಿಶೀಟರ್ ಎಂದು ಅಲ್ಲಿನ ಎಸ್.ಪಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾರನ್ನು ಬೇಕಿದ್ದರು ರೌಡಿಶೀಟರ್ ಎಂದು ಘೋಷಿಸುತ್ತದೆ. 2017ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 28 ಸಾವಿರ ಹಿಂದೂ ಕಾರ್ಯಕರ್ತರ ವಿರುದ್ಧ ರೌಡಿ ಶೀಟ್ ತೆರೆಲಾಗಿದೆ.
– ಆರಗ ಜ್ಞಾನೇಂದ್ರ, ಶಾಸಕ
ಸಾಗರ: ಶಿವಪ್ಪನಾಯಕ ವೃತ್ತದಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ, ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಪ್ರತಿಭಟಿಸಲಾಯಿತು. ಹತ್ಯೆ ಮಾಡಿದವರಿಗೆ ಠಾಣೆಯಲ್ಲಿ ರಾಜಾಥಿತ್ಯ ನೀಡುವುದು ಬೇಡ. ಅವರಿಗೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು. ಹಿಂದೂಗಳ ಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಪೊಲೀಸರು ಕೈಗೆ ಬಂದೂಕು ಕೊಟ್ಟಿರುವು ಅಲಂಕಾರಕ್ಕಲ್ಲ. – ಹರತಾಳು ಹಾಲಪ್ಪ, ಮಾಜಿ ಸಚಿವ
ಹೊಳೆಹೊನ್ನೂರು: ಇಲ್ಲಿನ ಅರಹತೊಳಲು ಸರ್ಕಲ್ನಲ್ಲಿ ಬಿಜೆಪಿ ಹೊಳೆಹೊನ್ನೂರು ಮಂಡಲದ ವತಿಯಿಂದ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.
– ಎಂ.ಮಲ್ಲೇಶಪ್ಪ, ಬಿಜೆಪಿ ಮಂಡಲ ಅಧ್ಯಕ್ಷ
ಇದನ್ನೂ ಓದಿ » ಶಿವಮೊಗ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200