ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 OCTOBER 2023
SHIMOGA : ಲೋಕಾಯುಕ್ತ ಪೊಲೀಸ್ (Lokayukta) ವಿಭಾಗದ ವತಿಯಿಂದ ಜಿಲ್ಲೆಯಾದ್ಯಂತ ಕುಂದು ಕೊರತೆ ಅರ್ಜಿ ಸ್ವೀಕಾರ ನಿಗದಿಪಡಿಸಲಾಗಿದೆ. ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ದೊರಕಿಸಿಕೊಡುವಲ್ಲಿ ಬೇಜವಾಬ್ದಾರಿ, ಕರ್ತವ್ಯ ನಿರ್ವಹಿಸಲು ಅಧಿಕಾರಿಗಳ ನಿರ್ಲಕ್ಷ್ಯ, ವಿಳಂಬ, ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ.
ಎಲ್ಲೆಲ್ಲಿ ನಡೆಯುತ್ತೆ ಸಭೆ?
ಅ.19ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ. ಅ.20ರಂದು ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ, ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ವರೆಗೆ. ಅ.21ರಂದು ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅಹವಾಲು ಸ್ವೀಕರಿಸಲಾಗುತ್ತದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಕೆಲಸ ಶುರು, ಇಲ್ಲಿದೆ ಕಾಮಗಾರಿ ಕುರಿತ 4 ಪ್ರಮುಖಾಂಶ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





