ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021
ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನು ಕೆಲವು ಕಡೆ ಮಳೆ, ಬಿಸಿಲಿನ ಕಣ್ಣಾ ಮುಚ್ಚಾಲೆ ಮುಂದುವರೆದಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ.
ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 35.03 ಮಿ.ಮೀ ಮಳೆಯಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 9.60 ಮಿ.ಮೀ, ಭದ್ರಾವತಿಯಲ್ಲಿ 7.20 ಮಿ.ಮೀ, ತೀರ್ಥಹಳ್ಳಿಯಲ್ಲಿ 25. 80 ಮಿ.ಮೀ, ಸಾಗರದಲ್ಲಿ 17.40 ಮಿ.ಮೀ, ಶಿಕಾರಿಪುರದಲ್ಲಿ 7.40 ಮಿ.ಮೀ, ಸೊರಬದಲ್ಲಿ 10 ಮಿ.ಮೀ, ಹೊಸನಗರದಲ್ಲಿ 167.80 ಮಿ.ಮೀ ಮಳೆಯಾಗಿದೆ.
ಸ್ವಲ್ಪ ತಗ್ಗಿದ ಮಳೆ
ಇವತ್ತು ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿದ್ದ ಮಳೆ ಕೊಂಚ ಬಿಡುವು ನೀಡಿದೆ. ಹಾಗಾಗಿ ಜನರು ನಿಟ್ಟುಸಿರು ಬಿಡುವಂತಾಗಿದೆ.
ಇನ್ನು, ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆಯಾಟ ಮುಂದುವರೆದಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಸ್ವಲ್ಪ ಹೊತ್ತು ಸುರಿದು ಮಳೆ ನಿಲ್ಲುತ್ತಿದ್ದಂತೆ, ಜೋರು ಬಿಸಿಲು ಆವರಿಸುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದ್ದು, ಜನರಲ್ಲಿ ಭಯ ಮೂಡಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200