| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತು ಮಳೆ (Rain) ಪ್ರಮಾಣ ತಗ್ಗಿದೆ. ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದ್ದರು ಮಳೆ ಕಡಿಮೆಯಾಗಿದೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇವತ್ತು ಸಾಧಾರಣ ಮಳೆಯಾಗುತ್ತಿದೆ. ಕೆಲವೆಡೆ ಮಾತ್ರ ಸ್ವಲ್ಪ ಹೊತ್ತು ಜೋರು ಮಳೆಯಾಗಿರುವ ವರದಿಯಾಗಿದೆ. ಇಂದು ಬೆಳಗ್ಗೆ 8.30ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸರಾಸರಿ 21 ಮಿ.ಮೀ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ.
ಎರಡು ದಿನದಿಂದ ಮಳೆ ಕಡಿಮೆ
ಮಂಗಳವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಮಂಗಳವಾರ ಬೆಳಗ್ಗೆ 8.30ರಿಂದ ಬುಧವಾರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 24.7 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 6.9 ಮಿ.ಮೀ, ಹೊಸನಗರ 31.3 ಮಿ.ಮೀ, ಸಾಗರ 28.3 ಮಿ.ಮೀ, ಶಿಕಾರಿಪುರ 7.5 ಮಿ.ಮೀ, ಶಿವಮೊಗ್ಗ 8.9 ಮಿ.ಮೀ, ಸೊರಬ 15.3 ಮಿ.ಮೀ, ತೀರ್ಥಹಳ್ಳಿ 56.9 ಮಿ.ಮೀ ಮಳೆಯಾಗಿದೆ.
ಸರಿದ ಮೋಡ, ಆವರಿಸಿದ ಬಿಸಿಲು
ಇನ್ನು, ಜಿಲ್ಲೆಯಲ್ಲಿ ಬಿಸಿಲು ಆವರಿಸಿದೆ. ಸಣ್ಣ ಪ್ರಮಾಣದ ಮಳೆಯಾಗಿ ಬಳಿಕ ಅಲ್ಲಲ್ಲಿ ಬಿಸಿಲು ಕಾಣಿಸಿಕೊಂಡಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದಲು ಬಿಸಿಲು ಇದೆ. ಸಂಜೆ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ತುಂಗಾ ಡ್ಯಾಮ್ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()