ಶಿವಮೊಗ್ಗ ಜಿಲ್ಲೆಯಲ್ಲಿ ಬಿಡುವು ಕೊಟ್ಟ ವರುಣ, ಜನರು ಸ್ವಲ್ಪ ನಿರಾಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021

ಕಳೆದ ಎರಡು ದಿನದಿಂದ ಅಬ್ಬರಿಸಿದ್ದ ಪುಷ್ಯಾ ಮಳೆ ಬಿಡುವು ನೀಡಿದೆ. ಇದರಿಂದ ತಗ್ಗು ಪ್ರದೇಶದ ಜನರು ನಿರಾಳರಾಗಿದ್ದಾರೆ. ಗದ್ದೆ, ತೋಟದಲ್ಲಿ ನೀರು ನಿಂತು ಬೆಳೆ ಹಾನಿಯಾಗುವ ಆತಂಕದಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ.

ಮಧ್ಯಾಹ್ನದಿಂದ ಜಿಲ್ಲೆಯಾದ್ಯಂತ ಮಳೆ ಅಬ್ಬರ ತುಸು ಕಡಿಮೆಯಾಗಿದೆ. ಹಾಗಾಗಿ ಪ್ರವಾಹ ಭೀತಿ ದೂರಾಗಿದೆ.

ಸೀಗೆಹಟ್ಟಿ ಭಾಗದಲ್ಲಿ ಢವಢವ

ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾದಂತೆ ಶಿವಮೊಗ್ಗ ನಗರದ ಹಳೆ ಶಿವಮೊಗ್ಗ ಭಾಗ ಜಲಾವೃತವಾಗುವ ಭೀತಿ ಉಂಟಾಗಿತ್ತು. ಸಂಜೆ ವೇಳೆಗೆ ತುಂಗಾ ಜಲಾಶಯದಿಂದ 87 ಸಾವಿರ ಕ್ಯೂಸೆಕ್ ನೀರು ಹೊರ ಬಿಡುತ್ತಿದ್ದಂತೆ ಸೀಗೆಹಟ್ಟಿ ಸುತ್ತಮುತ್ತಲ ಪ್ರದೇಶಕ್ಕೆ ನೀರು ನುಗ್ಗಿತ್ತು. ಈಗ ತೀರ್ಥಹಳ್ಳಿ ಭಾಗದಲ್ಲಿ ಮಳೆ ಸ್ವಲ್ಪ ಬಿಡುವು ನೀಡಿದೆ. ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ತಗ್ಗುವ ಸಂಭವವಿದೆ. ಆದರೆ ಮಳೆ ಹೆಚ್ಚಾದರೆ ಮತ್ತೆ ಮುಳುಗಡೆ ಭೀತಿ ಎದುರಾಗಲಿದೆ.

ತಗ್ಗಿದ ಮಳೆ ಪ್ರಮಾಣ

ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಬಿಡುವು ಕೊಡದೆ ಸುರಿಯುತ್ತಿದ್ದ ಮಳೆ ಕಡಿಮೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ ಎಂದು ತಿಳಿದು ಬಂದಿದೆ. ಕೆಲವು ಕಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದ ಮಳೆ ಬಿಡುವು ನೀಡಿದೆ.

ಪುಷ್ಯಾ ಮಳೆ ಅಬ್ಬರಕ್ಕೆ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಮಳೆ ಕಡಿಮೆ ಆಗಿರುವುದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.

201910078 1160313744448534 8497670934895384150 n.jpg? nc cat=105&ccb=1 3& nc sid=730e14& nc ohc=sHo9IUZf8icAX 5M4v0&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment