SHIVAMOGGA LIVE NEWS, 9 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಂಗಳೂರು : ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ಹಲವೆಡೆ ಮತ್ತೆ ಮಾಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಡಿ.10 ರಿಂದ 13ರವರೆಗೆ ದಕ್ಷಿಣ ಭಾರತದ ಹಲವೆಡೆ ಮಳೆಯಾಗಲಿದೆ.
ಡಿ.10ರಂದು ತಮಿಳುನಾಡು, ಪುದುಚೆರಿ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಹಾಗಾಗಿ ಈ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಡಿ.11ರಂದು ತಮಿಳುನಾಡು, ಪುದುಚೆರಿಗೆ ಆರೆಂಜ್ ಅಲರ್ಟ್, ಆಂಧ್ರದ ಕರಾವಳಿ, ರಾಯಲಸೀಮ ಭಾಗಕ್ಕೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ರಾಜ್ಯದಲ್ಲೂ ಮಳೆ ಮುನ್ಸೂಚನೆ
ಡಿ.12ರಂದು ಕರ್ನಾಟಕದ ಹಲವೆಡೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಂದು ತಮಿಳುನಾಡು, ಪುದುಚೆರಿಗೆ ಆರೆಂಜ್ ಅಲರ್ಟ್, ಆಂಧ್ರದ ಕರಾವಳಿ, ರಾಯಲಸೀಮ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ ರಾಜ್ಯಕ್ಕೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಡಿ.13ರಂದು ತಮಿಳುನಾಡು, ಪುದುಚೆರಿ, ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಭಾಗ ಮತ್ತು ಕೇರಳ ರಾಜ್ಯಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮತ್ತೆ ಮಳೆಯಿಂದ ರೈತರು ಹೈರಾಣು
ಫೆಂಗಲ್ ಚಂಡಮಾರುತದಿಂದಾಗಿ ಕಳೆದ ವಾರ ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗಿತ್ತು. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದರು. ಕೊಯ್ಲು ಮಾಡಿದ್ದ ಭತ್ತವನ್ನು ಮಳೆಯಿಂದ ರಕ್ಷಿಸುವುದಕ್ಕೆ ಹರಸಾಹಸ ಪಟ್ಟಿದ್ದರು. ಬಹುತೇಕ ಕಡೆ ಹುಲ್ಲು ತೊಯ್ದು ಹೋಗಿದೆ.
ಇದನ್ನೂ ಓದಿ » ಶಿವಮೊಗ್ಗದ ಸರ್ಜಿ ಆಸ್ಪತ್ರೆ ಇನ್ಮುಂದೆ ಪೇಪರ್ ಲೆಸ್, ಏನಿದು?
ಚಂಡಮಾರುತದ ಅಬ್ಬರ ಕಡಿಮೆಯಾಗುತ್ತಿದ್ದಂತೆ ಕೊಯ್ಲು ಆರಂಭವಾಗಿತ್ತು. ಈಗ ವಾಯುಭಾರ ಕುಸಿತದಿಂದಾಗಿ ಮಳೆಯ ಮುನ್ಸೂಚನೆ ಹೊರ ಬೀಳುತ್ತಿದ್ದಂತೆ ರೈತರು ಆತಂಕಕ್ಕೀಡಾಗಿದ್ದಾರೆ. ಕೊಯ್ಲು ಮುಂದೂಡುವತ್ತ ಯೋಚಿಸುತ್ತಿದ್ದಾರೆ. ಇನ್ನು ಈಗಾಗಲೇ ಕೊಯ್ಲು ಮುಗಿಸಿದವರು ಭತ್ತದ ರಕ್ಷಣೆಗೆ ಮಾರ್ಗೋಪಾಯ ಕಂಡುಕೊಳ್ಳಬೇಕಾಗಿದೆ.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





