ಶಿವಮೊಗ್ಗದಲ್ಲಿ ಮಳೆ ಕೊರತೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕಡಿಮೆಯಾಗಿದೆ? ಕೃಷಿಕರ ಪರಿಸ್ಥಿತಿ ಹೇಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 27 JUNE 2023

SHIMOGA : ಕಳೆದ ಎರಡು ದಿನ ದಟ್ಟ ಮೋಡದೊಂದಿಗೆ ಕಾಣಿಸಿಕೊಂಡಿದ್ದ ವರುಣ (Rain) ಮತ್ತೆ ನಾಪತ್ತೆಯಾಗಿದ್ದಾನೆ. ಭೂಮಿ ಹದ ಮಾಡಿಟ್ಟುಕೊಂಡು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದ ರೈತರು ಪುನಃ ಆಗಸದತ್ತ ಮುಖ ಮಾಡಿದ್ದಾರೆ.

Low-rain-Shimoga-district

ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ದಟ್ಟ ಮೋಡ ಮತ್ತು ತುಂತುರು ಮಳೆಯಾಗಿತ್ತು. ಆದರೆ ಸೋಮವಾರ ಬಿಸಿಲು ಆವರಿಸಿ ಮಳೆಯ ಸೂಚನೆ ಕಾಣದಂತಾಯಿತು. ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ.

ನಿರೀಕ್ಷೆಯಂತೆ ಸುರಿಯದ ಮಳೆ

ವಿಳಂಬವಾಗಿ ಆಗಮಿಸಿದ ಮುಂಗಾರು (Monsoon) ಈಗಾಗಲೆ ರಾಜ್ಯವನ್ನು ವ್ಯಾಪಿಸಿದೆ. ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಯನ್ನು ನೀಡಿತ್ತು. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗು ನಿರೀಕ್ಷಿತ ಮಳೆಯಾಗಿಲ್ಲ. ಹಾಗಾಗಿ ಕೆರೆಗಳಲ್ಲಿ ನೀರು ಕಡಿಮೆಯಾಗಿದೆ. ಜಲಾಶಯಗಳ ನೀರಿನ ಮಟ್ಟ ಡೆಡ್‌ ಸ್ಟೋರೇಜ್‌ ಹಂತಕ್ಕೆ ತಲುಪಿದೆ.

ವಾಡಿಕೆಗಿಂತ ಭಾರಿ ಕಡಿಮೆ ಮಳೆ

ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಮಳೆ (Rain) ಪ್ರಮಾಣ ಭಾರಿ ಕುಸಿತ ಕಂಡಿದೆ. ಹವಾಮಾನ ಇಲಾಖೆಯ ಅಂದಾಜಿನ ಪ್ರಕಾರ ಶೇ.78ರಷ್ಟು ಮಳೆ ಕೊರತೆಯಾಗಿದೆ. ಜೂನ್‌ ತಿಂಗಳಲ್ಲಿ ಈವರೆಗು 84 ಮಿ.ಮೀ ಮಾತ್ರ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಜೂನ್‌ ತಿಂಗಳಲ್ಲಿ ಈವರೆಗು ಶೇ.63ರಷ್ಟು ಮಳೆ ಕೊರತೆಯಾಗಿದೆ. ತೀರ್ಥಹಳ್ಳಿಯಲ್ಲಿ ಶೇ.77, ಹೊಸನಗರದಲ್ಲಿ ಶೇ.80, ಸಾಗರದಲ್ಲಿ ಶೇ.62, ಸೊರಬದಲ್ಲಿ ಶೇ.79, ಶಿಕಾರಿಪುರದಲ್ಲಿ ಶೇ.83, ಭದ್ರಾವತಿಯಲ್ಲಿ ಶೇ. 31ರಷ್ಟು ಮಳೆ ಕೊರತೆಯಾಗಿದೆ.

Shimoga city rain

ಬಹು ಹೊತ್ತು ಉಳಿಯದ ಸಂತಸ

ಜೂ.24 ಮತ್ತು 25ರಂದು ಜಿಲ್ಲೆಯಲ್ಲಿ ದಟ್ಟ ಮೋಡ ಆವರಿಸಿ, ತುಂತುರು ಮಳೆ (Rain) ಶುರುವಾಗಿತ್ತು. ಇದರಿಂದ ಭೂಮಿ ಹದವಾಗಿದೆ. ರೈತರು ಹೊಲಗಳಲ್ಲಿ ಬೇಸಾಯ ಹೂಡಿ ಬಿತ್ತನೆ ಪೂರ್ವ ಚಟುವಟಿಕೆ ಆರಂಭಿಸಿದ್ದರು. ಆದರೆ ಸೋಮವಾರ ಬೆಳಗ್ಗೆ ಹೊತ್ತಿಗೆ ಕಾರ್ಮೋಡ ಸರಿದು, ಬಿಸಿಲು ಆವರಿಸಿದೆ. ಭತ್ತ, ಜೋಳ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದ ರೈತರು ತಲೆ ಮೇಲೆ ಕೈ ಹೊತ್ತು ಆಗಸದತ್ತ ದೃಷ್ಟಿ ನೆಟ್ಟಿದ್ದಾರೆ.

jowar / jola seeds planting in Shikaripura

ಇದನ್ನೂ ಓದಿ – ತಾಳಗುಪ್ಪ – ಶಿವಮೊಗ್ಗ – ಮೈಸೂರು ರಾತ್ರಿ ರೈಲು ಸೇರಿ ಮೂರು ರೈಲುಗಳ ಸಮಯಲ್ಲಿ ಮಹತ್ವದ ಬದಲಾವಣೆ

ಮಳೆ ಬಿರುಸಾಗುವ ಮುನ್ಸೂಚನೆ

ರಾಜ್ಯಾದ್ಯಂತ ಮುಂಗಾರು ಬಿರುಸಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ ಇನ್ನೆರಡು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದರಿಂದ ರೈತರಲ್ಲಿ ತುಸು ನೆಮ್ಮದಿಯ ಭಾವ ಮೂಡಿದೆ. ಆದರೆ ಮಳೆ ಸುರಿಯದೆ ಬಿತ್ತನೆ ಕಾರ್ಯ ಮತ್ತು ಇತರೆ ಕೃಷಿ ಚಟುವಟಿಕೆ ಆರಂಭವಾಗುವುದಿಲ್ಲ. ಹಾಗಾಗಿ ರೈತರು ಚಿಂತೆಗೀಡಾಗಿದ್ದಾರೆ.

Rain in Shimoga Savalanga Road near Usha Nursing Home

ಕುಡಿಯುವ ನೀರಿನದ್ದೆ ಯೋಚನೆ

ಇನ್ನು, ಮಳೆಯಾಗದೆ ಇರುವುದರಿಂದ ಜಿಲ್ಲೆಯ ಎಲ್ಲ ಜಲಾಶಯಗಳು ಬಣಗುಡುತ್ತಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಡೆಡ್‌ ಸ್ಟೋರೇಜ್‌ ಹಂತಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಜುಲೈ ಮಧ್ಯ ಭಾಗದವರೆಗೆ ಕುಡಿಯುವ ನೀರು ಪೂರೈಕೆ ಮಾಡಲು ಅವಕಾಶವಿದೆ. ಆ ಬಳಿಕ ನೀರಿಗೆ ತತ್ವರ ಎದುರಾಗಲಿದೆ. ಮಳೆಯ ನಿರೀಕ್ಷೆಯಲ್ಲಿರುವ ಅಧಿಕಾರಿಗಳು ಕುಡಿಯುವ ನೀರಿಗೆ ಸಮಸ್ಯೆ ಆಗದ ಹಾಗೆ ಸಿದ್ಧತೆಗಳನ್ನೂ ಆರಂಭಿಸಿದ್ದಾರೆ.

ಇದನ್ನೂ ಓದಿ – ಮಳೆಗಾಗಿ ಪೂಜೆ ಸಲ್ಲಿಸುತ್ತಿದ್ದಾಗಲೆ ವರುಣ ಪ್ರತ್ಯಕ್ಷ, ಶಿವಮೊಗ್ಗದಲ್ಲಿ ಕಪಿಲೇಶ್ವರನ ಪವಾಡ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment