| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 11 APRIL 2024
RAIN NEWS : ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗಿದೆ. ಇದರಿಂದ ತಾಪಮಾನ ಇಳಿಕೆಯಾಗಿದೆ. ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರ ತಾಲೂಕುಗಳಲ್ಲಿ ಮಳೆಯಾಗಿದೆ.
ಎಲ್ಲೆಲ್ಲಿ ಮಳೆಯಾಗಿದೆ?
ಶಿವಮೊಗ್ಗ ತಾಲೂಕಿನಲ್ಲಿ ಮಳೆ
ಶಿವಮೊಗ್ಗ ತಾಲೂಕಿನ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಆಯನೂರು ಬಳಿ ಮರ ಬುಡಮೇಲಾಗಿ ಹೆದ್ದಾರಿಗೆ ಉರುಳಿತ್ತು. ಇದರಿಂದ ವಾಹನ ಸಂಚಾರ ವ್ಯತ್ಯಯವಾಗಿತ್ತು. ಇನ್ನು ಆಯನೂರು ಕೋಟೆ ಬಳಿ ಮೇಯಲು ಬಿಟ್ಟಿದ್ದ 18 ಕುರಿಗಳಿಗೆ ಸಿಡಿಲು ಬಡಿದು ಸಾವನ್ನಪ್ಪಿವೆ. ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ಮಾಲೀಕ ಜಾಕೀರ್ ಹುಸೇನ್ ತಿಳಿಸಿದ್ದಾರೆ. ತಾಲೂಕಿನ ಕುಂಸಿ, ಆಯನೂರು, ಶಿವಮೊಗ್ಗ ಪಟ್ಟದ ವಿವಿಧೆಡೆ ಮಳೆಯಾಗಿದೆ.
ತೀರ್ಥಹಳ್ಳಿ, ಶಿಕಾರಿಪುರದಲ್ಲೂ ಮಳೆ
ಇನ್ನೊಂದೆಡೆ ತೀರ್ಥಹಳ್ಳಿ, ಶಿಕಾರಿಪುರ ತಾಲೂಕಿನ ವಿವಿಧೆಡೆಯು ಮಳೆಯಾದ ವರದಿಯಾಗಿದೆ. ಇದರಿಂದ ಈ ಭಾಗದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕೆಲವು ಗ್ರಾಮದಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಇನ್ನೊಂದೆಡೆ ಮಳೆಯಾಗಿದ್ದರಿಂದ ಪುನೇದಹಳ್ಳಿಯಲ್ಲಿ ರೈತ ಅರುಣ್ ಕುಣಿದು ಕುಪ್ಪಳಿಸಿದ ವಿಡಿಯೋ ವೈರಲ್ ಆಗಿದೆ.
ತಾಪಮಾನ ಭಾರಿ ಇಳಿಕೆ
ಕಳೆದ ಕೆಲವು ದಿನದಿಂದ ಜಿಲ್ಲೆಯಲ್ಲಿ ತಾಪಮಾನ ಭಾರಿ ಏರಿಕೆಯಾಗಿತ್ತು. 40 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ತಲುಪಿತ್ತು. ಇದರಿಂದ ಜನರು ಕಂಗೆಟ್ಟಿದ್ದರು. ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದರಿಂದ ತಾಪಮಾನ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ. ಶನಿವಾರವು ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಂಭವವಿದೆ. ಆ ಬಳಿಕ ಮತ್ತೆ ಉಷ್ಣಾಂಶ ಏರಿಕೆಯಾಗುವ ಆತಂಕವಿದೆ.
ಇದನ್ನೂ ಓದಿ – ಪತ್ನಿಗೆ ಸಾಲ ನೀಡಿದ ಈಶ್ವರಪ್ಪ, ಎಲ್ಲೆಲ್ಲಿ ಎಷ್ಟು ಆಸ್ತಿ ಹೊಂದಿದ್ದಾರೆ? ನಗದು, ಚಿನ್ನಾಭರಣ ಎಷ್ಟಿದೆ? ಇಲ್ಲಿದೆ ಡಿಟೇಲ್ಸ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()