| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ : ಜಿಲ್ಲೆಯಲ್ಲಿ ಇವತ್ತೂ ಮಳೆ (Rainfall) ಮುಂದುವರೆದಿದೆ. ಮಧ್ಯಾಹ್ನದ ವೇಳೆಗೆ ಶುರುವಾದ ಮಳೆ ಎಡೆಬಿಡದೆ ಸುರಿಯುತ್ತಿದೆ. ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ.
ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದ ವಿವಿಧೆಡೆ ಜೋರು ಮಳೆಯಾಗುತ್ತಿದೆ (Rainfall). ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣವಿದೆ. ವಿವಿಧೆಡೆ ತುಂತುರು ಮಳೆಯಾದ ಮಾಹಿತಿ ಇದೆ.
ಮಾರುತಿಪುರ, ತಾಳಗುಂದದಲ್ಲಿ ಭಾರಿ ಮಳೆ
![]()
ಹೊಸನಗರ ತಾಲೂಕು ಮಾರುತಿಪುರ, ಶಿಕಾರಿಪುರದ ತಾಳಗುಂದ, ಸಾಗರದ ಹೊಸೂರು, ಸೊರಬದ ಇಂಡುವಳ್ಳಿ, ಬಿಳುವಾಣಿ ಸುತ್ತಮುತ್ತ ಇವತ್ತು ಭಾರಿ ಮಳೆಯಾದ ವರದಿಯಾಗಿದೆ. ಮಾರುತಿಪುರ ಸುತ್ತಮುತ್ತ ಈತನಕ 51 ಮಿ.ಮೀ ಮಳೆಯಾಗಿದೆ. ಶಿಕಾರಿಪುರ ತಾಲೂಕು ತಾಳಗುಂದಲ್ಲಿ 40 ಮಿ.ಮೀ ಮಳೆಯಾಗಿದೆ. ಭಾರಿ ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಜೋರು ಮಳೆ ತಂಪು ನೀಡಿದೆ.

ಇದನ್ನೂ ಓದಿ » ಹೊಸಮನೆ ಚಾನಲ್ ಏರಿ ಮೇಲೆ ಭೀಕರ ಅಪಘಾತ, ಯುವಕನ ಸ್ಥಿತಿ ಗಂಭೀರ
ಕೋಡೂರಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ
ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕು ಕೋಡೂರಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ 82 ಮಿ.ಮೀ ಮಳೆಯಾಗಿದೆ. ಕೋಡೂರು ಸುತ್ತಮುತ್ತ ಸುರಿದ ಭಾರಿ ಮಳೆಗೆ ತೋಟ, ಗದ್ದೆಯಲ್ಲಿ ಬೆಳೆ ಹಾನಿ ಉಂಟಾಗಿತ್ತು.

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()