Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಜಿಲ್ಲೆ, ಮಳೆ ಕಡಿಮೆಯಾದರೂ ನಿಲ್ಲದ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಸುದ್ದಿ

ಶಿವಮೊಗ್ಗ ಜಿಲ್ಲೆ, ಮಳೆ ಕಡಿಮೆಯಾದರೂ ನಿಲ್ಲದ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಸುದ್ದಿ

18/06/2025 8:53 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತುಸು ಇಳಿಕೆಯಾಗಿದೆ. ಅಲ್ಲಲ್ಲಿ ಮಂಗಳವಾರ ಬಿಸಿಲು ಕಾಣಿಸಿಕೊಂಡು, ಜನರು ಕೊಂಚ ನಿಟ್ಟುಸಿರು ಬಿಡುವಂತಾಯಿತು. ಇನ್ನು, ಮಳೆ ಪ್ರಮಾಣ ಇಳಿಕೆಯಾದರು ಹಾನಿ ಮುಂದುವರೆದಿದೆ. (Rainfall Effect)

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಆದರೆ ಇವತ್ತೂ ಮಳೆ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಗಿದೆ?

ತೂದೂರು ಬಳಿ ತುಂಬಿ ಹರಿದ ಕುಂಟೇಹಳ್ಳ

Speed News 1ತೀರ್ಥಹಳ್ಳಿ: ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡ್ಲುವಿನಲ್ಲಿ ಕುಂಟೇಹಳ್ಳ ತುಂಬಿ ಹರಿಯುತ್ತಿದೆ. ಮಂಜುನಾಥ ಶೆಟ್ಟಿ ಎಂಬುವವರ ತೋಟದ ಸುಮಾರು 30 ಅಡಿಕೆ ಮರಗಳು ಕೊಚ್ಚಿ ಹೋಗಿವೆ. ಇದರಿಂದ ಹಳ್ಳದ ಬದಿಯಲ್ಲಿರುವ ಇತರೆ ರೈತರು ಆತಂಕಕ್ಕೀಡಾಗಿದ್ದಾರೆ.

ವಿದ್ಯುತ್‌ ಕಂಬಗಳಿಗೆ ಹಾನಿ

Speed News 2ತೀರ್ಥಹಳ್ಳಿ: ತಾಲೂಕಿನ ವಿವಿಧೆಡೆ ಮರ ಬಿದ್ದು 9 ವಿದ್ಯುತ್‌ ಕಂಬಗಳು ನೆಲಕಚ್ಚಿವೆ. ಕಟ್ಟೆಹಕ್ಕಲು ಗ್ರಾಮದಲ್ಲಿ ಮರ ಉರುಳಿ 5 ವಿದ್ಯುತ್‌ ಕಂಬಗಳು ಮುರಿದಿವೆ. ಮೇಗರವಳ್ಳಿ, ದೇವಂಗಿ, ಆರಗ ಗ್ರಾಮದಲ್ಲು ಮರ ಬಿದ್ದು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ.

ಆಗುಂಬೆಯಲ್ಲಿ ರಸ್ತೆಗೆ ಬಿದ್ದ ಮರ

Speed News 3ತೀರ್ಥಹಳ್ಳಿ: ಆಗುಂಬೆ ಚೆಕ್‌ಪೋಸ್ಟ್‌ ಸಮೀಪ ಬೃಹತ್‌ ಮರ ಧರೆಗುರುಳಿದ್ದು, ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು ಮಾಡಿದ್ದಾರೆ. ಘಟನೆಯಿಂದಾಗಿ ರಸ್ತೆಯ ಎರಡು ಬದಿಯಲ್ಲಿ ಕಿಲೋ ಮೀಟರ್‌ ಉದ್ದಕ್ಕೆ ವಾಹನಗಳು ನಿಂತಿದ್ದವು.

tree-falls-to-agumbe-road-in-Thirthahalli.

ಹಾರೋಗೊಪ್ಪ ಬಳಿ ಮನೆ ಭಾಗಶಃ ಕುಸಿತ

Speed News 4ಶಿಕಾರಿಪುರ: ಇಲ್ಲಿನ ಹಾರೋಗೊಪ್ಪ ಸಮೀಪದ ಎಂಸಿಆರ್‌ಬಿ ಕಾಲೋನಿಯಲ್ಲಿ ಮನೆಯೊಂದು ಭಾಗಶಃ ಕುಸಿದಿದೆ. ವಿಷಯದ ತಿಳಿದು ಹಲವರು ಭೇಟಿ ನೀಡಿದ್ದರು. ಇನ್ನು, ಶಿಕಾರಿಪುರ – ಆನಂದಪುರ ರಸ್ತೆಗೆ ಮರ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರ ಬಂದ್‌ ಆಗಿತ್ತು.

ತ್ಯಾಗರ್ತಿ ಸಮೀಪ ಗೋಡೆ, ಮೇಲ್ಛಾವಣಿ ಕುಸಿತ

Speed News 5ಸಾಗರ: ತ್ಯಾಗರ್ತಿ ಸಮೀಪದ ಮಳ್ಳಾ ಗ್ರಾಮದಲ್ಲಿ ಲಲಿತಮ್ಮ ನಾಗಪ್ಪ ಎಂಬುವವರ ಮನೆ ಗೋಡೆ ಕುಸಿದಿದೆ. ರಾಮಪ್ಪ ದಿವಾನಪ್ಪ ಎಂಬುವವರ ಕೊಟ್ಟಿಗೆಯ ಮೇಲ್ಛಾವಣಿ ಕುಸಿದಿದೆ. ಸ್ಥಳಕ್ಕೆ ಕಾಂಗ್ರೆಸ್‌ ಮುಖಂಡರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

https://chat.whatsapp.com/JPJ0lTQsTKf365Fqu6Q7cd

ಭೂಮಿ ಬಿರುಕು, ಸ್ಥಳಕ್ಕೆ ಆರಗ ಭೇಟಿ

Speed News 6ಹೊಸನಗರ: ಇಲ್ಲಿನ ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್‌ನಲ್ಲಿ ಭೂಮಿ ಬಿರುಕು ಬಿಟ್ಟಿದೆ. ಶಾಸಕ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ‘ಕಳೆದ ವರ್ಷವು ಈ ಜಾಗದಲ್ಲಿ ಬಿರುಕು ಕಾಣಿಸಿತ್ತು. ಈ ಬಾರಿ ಮಳೆಗಾಲದ ಆರಂಭದಲ್ಲೇ ಬಿರುಕು ಬಂದಿದ್ದು ಆತಂಕಕಾರಿ. ಕೂಡಲೆ ತಜ್ಞರನ್ನು ಕಳುಹಿಸಿ ಸೂಕ್ತ ಅಧ್ಯಯನ ನಡೆಸಬೇಕುʼ ಎಂದರು.

Araga-Jnanendra-visit-to-hosangara

ಗೌತಮಪುರದಲ್ಲಿ ಉರುಳಿದ ಮರ

Speed News 7ಸಾಗರ: ಭಾರಿ ಗಾಳಿ, ಮಳೆಗೆ ಗೌತಮಪುರ ಗ್ರಾಮದ ತ್ಯಾಗರ್ತಿ ಕ್ರಾಸ್‌ನಲ್ಲಿ ಮರ ಧರೆಗುರುಳಿದೆ. ಇದರಿಂದ ಎರಡು ವಿದ್ಯುತ್‌ ಕಂಬಗಳಿಗು ಹಾನಿಯಾಗಿದೆ. ಆನಂದಪುರ – ಶಿವಮೊಗ್ಗ ಮಾರ್ಗದಲ್ಲಿ ಹೆದ್ದಾರಿಯಲ್ಲಿ ಆಚಾಪುರದಲ್ಲಿ ಮಾವಿನ ಮರದ ರೆಂಬೆ ವಿದ್ಯುತ್‌ ಲೈನ್‌ ಮೇಲೆ ಬಿದ್ದು ಈ ಭಾಗದಲ್ಲಿ ವಿದ್ಯುತ್‌ ವ್ಯತ್ಯಯವಾಗಿತ್ತು. ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿಯು ವಿದ್ಯುತ್‌ ವ್ಯತ್ಯಯವಾಗಿದೆ.

ಜಲಾಶಯಗಳ ನೀರಿನ ಮಟ್ಟ ಹೆಚ್ಚಳ

Speed News 8ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ ಒಳ ಹರಿವು ಇವತ್ತು 26,150 ಕ್ಯೂಸೆಕ್‌ಗೆ ತಗ್ಗಿದೆ. ಭದ್ರಾ ಮತ್ತು ತುಂಗಾ ಜಲಾಶಯಗಳ ಒಳ ಹರಿವು ಪ್ರಮಾಣವು ಇಳಿಕೆಯಾಗಿದೆ.

ಇದನ್ನೂ ಓದಿ » ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article WEATHER-REPORT-SHIMOGA- ಶಿವಮೊಗ್ಗದ ಹವಾಮಾನ ವರದಿ | 18 ಜೂನ್‌ 2025 | ಜಿಲ್ಲೆಗೆ ಯಲ್ಲೋ ಅಲರ್ಟ್‌, ಇವತ್ತು ಎಷ್ಟಿದೆ ತಾಪಮಾನ?
Next Article jobs news shivamogga live ಶಿವಮೊಗ್ಗದಲ್ಲಿ ಬಿ.ಫಾರ್ಮಾ, ಡಿ.ಫಾರ್ಮಾ, ಪದವಿ ಮಾಡಿದವರಿಗೆ ಉದ್ಯೋಗವಕಾಶ

ಇದನ್ನೂ ಓದಿ

Shimoga-News-update
FATAFAT NEWS

ರವೀಂದ್ರನಗರ ಗಣಪತಿ ದೇಗುಲದ ಮುಂಭಾಗ ನಾಗದೇವರ ಪ್ರತಿಷ್ಠಾಪನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Tunga-Dam-full
NEWS

ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
SHIMOGA-NEWS-UPDATE
FATAFAT NEWS

ಶಿವಮೊಗ್ಗದ ಬಿದಿರೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮಾ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?