SHIVAMOGGA LIVE NEWS | RAINFALL | 18 ಮೇ 2022
ಸುಳಿಗಾಳಿಯ ಪರಿಣಾಮ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಕಳೆದ ಮೂರು ದಿನದಿಂದ ಜಿಲ್ಲೆಯ ವಿವಿಧೆಡೆ ಮಳೆ (RAINFALL) ಅಬ್ಬರಿಸುತ್ತಿದೆ. ಇವತ್ತು ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 8.39 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 7.40 ಮಿ.ಮೀ, ಭದ್ರಾವತಿಯಲ್ಲಿ 14.60 ಮಿ.ಮೀ, ತೀರ್ಥಹಳ್ಳಿಯಲ್ಲಿ 9.20 ಮಿ.ಮೀ, ಸಾಗರದಲ್ಲಿ 1.20 ಮಿ.ಮೀ, ಶಿಕಾರಿಪುರದಲ್ಲಿ 4 ಮಿ.ಮೀ, ಸೊರಬದಲ್ಲಿ 2.30 ಮಿ.ಮೀ, ಹೊಸನಗರದಲ್ಲಿ 19.80 ಮಿ.ಮೀ ಮಳೆಯಾಗಿದೆ.
ಮೂರು ದಿನದಿಂದ ಮಳೆ
ಸುಳಿಗಾಳಿಯಿಂದಾಗಿ ಕಳೆದ ಮೂರು ದಿನದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಮೂರು ದಿನ ಮಳೆಯಾಗಿದೆ. ಮೇ 16ರಂದು ಜಿಲ್ಲೆಯಲ್ಲಿ 60 ಮಿ.ಮೀ ಮಳೆಯಾಗಿತ್ತು. ಮೇ 17ರಂದು ಮಳೆ ಪ್ರಮಾಣ ತಗ್ಗಿತ್ತು. ಇವತ್ತು ಪುನಃ ಮಳೆಯಾಗುತ್ತಿದೆ.
ಹೊಸನಗರದಲ್ಲಿ ಅತ್ಯಧಿಕ ಮಳೆ
ಸಾಮಾನ್ಯವಾಗಿ ಮೇ ತಿಂಗಳಲ್ಲಿ ಬಿಸಿಲು ಹೆಚ್ಚು. ಈ ಭಾರಿಯಂತೂ ವಿಪರೀತ ಬಿಸಿಲು ಮತ್ತು ಧಗೆ ಇತ್ತು. ಆದರೆ ಬೇಸಿಗೆಯ ಬಿಸಿ ಹೆಚ್ಚು ತಟ್ಟಲಿಲ್ಲ. ಮೇ ತಿಂಗಳಲ್ಲಿ ಆಗಾಗ ಮಳೆಯಾಗಿದೆ. ಕೆಲವು ಕಡೆಯಂತೂ ವಾಡಿಕೆಗಿಂತಲೂ ಹೆಚ್ಚು ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ವಾಡಿಕೆಗಿಂತಲೂ ಮೂರು ಪಟ್ಟು ಹೆಚ್ಚು ಮಳೆಯಾಗಿದೆ. ಮೇ ತಿಂಗಳ ವಾಡಿಕೆ ಮಳೆ 110 ಮಿ.ಮೀ. ಈ ತಿಂಗಳಲ್ಲಿ ಈತನಕ 347 ಮಿ.ಮೀ ಮಳೆಯಾಗಿದೆ. ತಾಲೂಕಿನಲ್ಲಿ ಮೇ 5ರಂದು 138 ಮಿ.ಮೀ ಮಳೆಯಾಗಿತ್ತು. ಮೇ 16ರಂದು 168 ಮಿ.ಮೀ ಮಳೆ ಸುರಿದಿದೆ.
ಇನ್ನು, ಶಿವಮೊಗ್ಗ ತಾಲೂಕಿನಲ್ಲಿ ಈ ತಿಂಗಳ ವಾಡಿಕೆ ಮಳೆ 92 ಮಿ.ಮೀ. ಈವರೆಗೂ 62 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 89 ಮಿ.ಮೀ ವಾಡಿಕೆ ಮಳೆ. ಈತನಕ 96 ಮಿ.ಮೀ ಮಳೆ ಸುರಿದಿದೆ. ತೀರ್ಥಹಳ್ಳಿಯಲ್ಲಿ 100 ಮಿ.ಮೀ ವಾಡಿಕೆ ಮಳೆ. ಆದರೆ 43 ಮಿ.ಮೀ ಮಳೆಯಾಗಿದೆ. ಸಾಗರದಲ್ಲಿ ವಾಡಿಕೆ ಮಳೆ ಪ್ರಮಾಣ 90 ಮಿ.ಮೀ. ಈವರೆಗೂ 86 ಮಿ.ಮೀ ಮಳೆಯಾಗಿದೆ. ಶಿಕಾರಿಪುರದಲ್ಲಿ 99 ಮಿ.ಮೀ ವಾಡಿಕೆ ಮಳೆ. ಈವರೆಗೂ 69 ಮಿ.ಮೀ ಮಳೆಯಾಗಿದೆ. ಸೊರಬದಲ್ಲಿ 80 ಮಿ.ಮೀ ವಾಡಿಕೆ ಮಳೆ. ಈವರೆಗೂ 76 ಮಿ.ಮೀ ಮಳೆಯಾಗಿದೆ.
ಮುಂಗಾರಿಗೂ ಮುನ್ನ ತಂಪು ತಂಪು
ಮೇ ತಿಂಗಳ ಕೊನೆಯಲ್ಲಿ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಅದಕ್ಕೂ ಮೊದಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ವಾತಾವರಣ ತಂಪಾಗಿದೆ. ಬೇಸಿಗೆಯಲ್ಲಿಯು ಮಳೆಗಾಲದಂತಾಗಿದೆ. ಜನ ಛತ್ರಿ, ರೇನ್ ಕೋಟ್’ಗಳನ್ನು ಜೊತೆಯಲ್ಲಿ ಹಿಡಿದು ಓಡುಡುವಂತಾಗಿದೆ.
ಸದ್ಯಕ್ಕೆ ಜಲಾಶಯಗಳು ಸಮೃದ್ಧ
ನಿರಂತರ ಮಳೆಯಿಂದಾಗಿ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಏರಿಕೆಯಾಗುತ್ತಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1763.45 ಅಡಿಯಷ್ಟು ನೀರಿನ ಸಂಗ್ರಹವಿದೆ. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿ. ಪ್ರಸ್ತುತ 148.10 ಅಡಿಯಷ್ಟು ನೀರಿದೆ.
ಇನ್ನು, ತುಂಗಾ ಜಲಶಾಯದ ಗರಿಷ್ಠ ಮಟ್ಟ 588.24 ಅಡಿ ಇದೆ. ಸದ್ಯ ಜಲಾಶಯ ಭರ್ತಿಯಾಗಿದೆ. ಈಗಾಗಲೇ ಜಲಾಶಯದಿಂದ ನೀರು ಹೊರಗೆ ಬಿಡುವ ಸಂಬಂಧ ಮೊದಲ ಮುನ್ನೆಚ್ಚರಿಕೆ ನೀಡಲಾಗಿದೆ.
ಬೇಸಗೆ ಹೊತ್ತಲ್ಲು ಮಳೆಯಾಗಿದ್ದರಿಂದ ಜಿಲ್ಲೆಯ ವಿವಿಧೆಡೆ ಬೆಳೆ ಹಾನಿ ಉಂಟಾಗಿದೆ. ಮತ್ತೊಂದೆಡೆ ಮುಂಗಾರು ಬೆಳೆ ಬೆಳೆಯಲು ಸಿದ್ಧತೆಗಳು ಕೂಡ ಆರಂಭವಾಗಿದೆ. ಈ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200