Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ

ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ

12/08/2024 6:08 PM
ನಿತಿನ್‌ ಕೈದೊಟ್ಲು

SHIMOGA, 12 AUGUST 2024 : ಬೆಳಗಾವಿಯ ರೆಸಾರ್ಟ್‌ (Resort) ಒಂದರಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದ್ದರು. ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯ ರಾಜಾರಣದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಪಾಳಯದಲ್ಲಿಯು ಕುತೂಹಲ ಮೂಡಿಸಿದೆ. ಈ ಮಧ್ಯೆ ರಾಷ್ಟ್ರಭಕ್ತರ ಬಳಗದ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ

POINT-1ಅನೇಕ ವರ್ಷ ಹಿರಿಯರು ತಪಸ್ಸು ಮಾಡಿ ಪಕ್ಷ ಕಟ್ಟಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಸಂಘಟನೆ ಮಾಡುತ್ತಿದ್ದಾರೆ. ಒಂದು ವೇಳೆ ಬೆಳಗಾವಿಯಲ್ಲಿ ಸಭೆ ನಡೆಸಿದವರು ಪಾದಯಾತ್ರೆ ಕೈಗೊಂಡರೆ ಪಕ್ಷದ ಸಂಘಟನೆಗೆ ತೊಡಕಾಗಲಿದೆ. ಪ್ರತಿ ತಾಲೂಕಿನಲ್ಲಿಯು ಬಿಜೆಪಿ ಎರಡು ಭಾಗವಾಗಲಿದೆ. ಅಧಿಕಾರ ಬೇಕು ಎಂಬುವವರು ಒಂದು ಕಡೆ. ಪಕ್ಷ, ಸಿದ್ದಾಂತ ಉಳಿಬೇಕು ಎಂಬುವವರು ಒಂದು ಕಡೆ ಉಳಿಯುತ್ತಾರೆ.

POINT-2ಬೆಳಗಾವಿಯಲ್ಲಿ ಸಭೆ ನಡೆಸಿದವರು 12 ಮಂದಿ ಮಾತ್ರ ಎಂದು ಉಡಾಫೆ ಬೇಡ. ಅವರಿಗೆಲ್ಲ ಸಂಘಟನೆ ಗಟ್ಟಿ ಆಗಬೇಕು ಎಂಬ ಆಸೆಯಿದೆ. ಅವರೆಲ್ಲ ಕೆಲಸ ಮಾಡುತ್ತಿರುವುದು ಪಕ್ಷಕ್ಕಾಗಿ. ಅಧಿಕಾರ, ಸ್ಥಾನಮಾನಕ್ಕೆ ಅಲ್ಲ. ಕೇಂದ್ರದ ನಾಯಕರು ಆ ಪಾದಯಾತ್ರೆ ಯೋಚನೆ ಮಾಡುತ್ತಿರುವವರನ್ನು ಕರೆದು ಮಾತಾಡಬೇಕು‌. ಆಗ ಎಲ್ಲ ಕಾರ್ಯಕರ್ತರಿಗು ತೃಪ್ತಿ ಆಗಲಿದೆ.

eshwarappa press meet

POINT-3ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಿದ್ದು ಹಲವರಲ್ಲಿ ಆಶ್ಚರ್ಯ ಮೂಡಿಸಿತ್ತು. ಯಡಿಯೂರಪ್ಪ ಮಗ ಎಂಬ ಒಂದೇ ಕಾರಣಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ವಿಧಾನಸಭೆಯಲ್ಲಿ 66 ಸ್ಥಾನಕ್ಕೆ ಕುಸಿದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ನೇತೃತ್ವದಲ್ಲಿ 25 ಸೀಟ್ ಗೆದ್ದಿದ್ದೆವು. ಈಗ ಹೊಂದಾಣಿಕೆ ಇದ್ದರೂ 28 ಸೀಟ್ ಗೆಲ್ಲಲು ಸಾಧ್ಯವಾಗಿಲ್ಲ. ಜೆಡಿಎಸ್‌ ಜೊತೆ ಮೈತ್ರಿಯಾಗದೆ ಇದ್ದಿದ್ದರೆ ಮತ್ತಷ್ಟು ಸ್ಥಾನ ಕಳೆದುಕೊಳ್ಳುತ್ತಿತ್ತು.

120824 KS Eshwarappa Press meet in Shimoga Press Trust

POINT-4ಕೇಂದ್ರದ ನಾಯಕರಿಗೆ ಯಡಿಯೂರಪ್ಪ ಕುಟುಂಬಕ್ಕೆ ಕೈಯಲ್ಲಿ ಪಾರ್ಟಿ ಕೊಡುವಂತ ಮೋಹ ಯಾಕೆ ಎಂಬುದು ತಿಳಿಯುತ್ತಿಲ್ಲ. ಈ ಹಿಂದೆ ಸಾಮೂಹಿಕ ನಾಯಕತ್ವದ ಕುರಿತು ಕೋರ್ ಕಮಿಟಿಯಲ್ಲಿ ಚರ್ಚೆಯಾಗುತ್ತಿತ್ತು. ಸಾಮೂಹಿಕವಾಗಿ ಯೋಚನೆ, ಯೋಜನೆ ಆಗುತ್ತಿತ್ತು. ಈಗ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ‌. ತಮ್ಮ ಕುಟುಂಬ, ತಮ್ಮ ಜಾತಿಯಲ್ಲಿ ತಮಗೆ ಬೇಕಾದವರಷ್ಟೇ ಎಲ್ಲೆಡೆ ಇರಬೇಕು ಎಂಬ ಸ್ವಜನ ಪಕ್ಷಪಾತವಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್‌

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 12 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?
Next Article Nehru-Stadium-Shimoga.webp ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?

ಇದನ್ನೂ ಓದಿ

Shimoga-News-update
FATAFAT NEWS

ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Agriculture-News-Farmer
FATAFAT NEWS

ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ ತೋಟಗಾರಿಕೆ ಇಲಾಖೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?