ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ (ARREST). ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?
ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು.
ಮಂಗಳವಾರ ಬೆಳಗ್ಗೆ ಅಪೆಕ್ಸ್ ಬ್ಯಾಂಕ್ ಅತಿಥಿ ಗೃಹದಲ್ಲಿ ಮಂಜುನಾಥ ಗೌಡ ಅವರಿದ್ದ ಕೊಠಡಿ ಮೇಲೆ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಮಂಗಳವಾರ ಸಂಜೆ ಇ.ಡಿ. ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಇವತ್ತು ಮಂಜುನಾಥ ಗೌಡ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200