ಶಿವಮೊಗ್ಗ ಲೈವ್.ಕಾಂ | SHIMOGA | 10 ಅಕ್ಟೋಬರ್ 2019
ಸಕ್ರೆಬೈಲು ಆನೆ ಬಿಡಾರಕ್ಕೆ ಇನ್ಮುಂದೆ ಹೊಸ ಬ್ರ್ಯಾಂಡ್ ಸಿಕ್ಕಂತಾಗಿದೆ. ಆನೆ ಬಿಡಾರಕ್ಕೆ ಪ್ರತ್ಯೇಕ ಲೋಗೋ ಸಿದ್ಧಪಡಿಸಲಾಗಿದೆ.
ಸಂಸದ ಬಿ.ವೈ.ರಾಘವೇಂದ್ರ ಸಕ್ರೆಬೈಲು ಆನೆ ಬಿಡಾರದಲ್ಲಿ ಇವತ್ತು ಲೋಗೋ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಕ್ರೆಬೈಲು ಆನೆ ಬಿಡಾರದಲ್ಲಿ ಎಲ್ಲವು ಇದೆ. ಅದಕ್ಕೆ ಬ್ರ್ಯಾಂಡ್ ಬೇಕಿತ್ತು. ಈಗ ಲೋಗೋ ಮೂಲಕ ಬ್ರ್ಯಾಂಡ್ ಆಗಿದೆ ಎಂದರು.
ಮಿನಿಸ್ಟರ್ ಕರೆದುಕೊಂಡು ಬರುತ್ತೇನೆ
ಸಕ್ರೆಬೈಲು ಆನೆ ಬಿಡಾರಕ್ಕೆ ಬರುವ ಪ್ರವಾಸಿಗರು ತುಂಬಾ ಹೊತ್ತು ಇಲ್ಲಿ ಸಮಯ ಕಳೆಯುವಂತಾಗಬೇಕು. ಇದಕ್ಕಾಗಿ ಇನ್ನೆರಷ್ಟು ಶೆಲ್ಟರ್ ವ್ಯವಸ್ಥೆ ಆಗಬೇಕಿದೆ. ಹೆಚ್ಚುವರಿ ಶೌಚಾಲಯದ ಬೇಕಿದೆ. ಹೆಚ್ಚುವರಿ ಡಾಕ್ಟರ್ ಅವಶ್ಯಕತೆ ಇದೆ. ಆನೆಗಳ ಆರೋಗ್ಯದ ದೃಷ್ಟಿಯಿಂದ ಮತ್ತಷ್ಟು ವ್ಯವಸ್ಥೆ ಬೇಕಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ, ಅರಣ್ಯ ಸಚಿವರನ್ನು ಸಕ್ರೆಬೈಲು ಆನೆ ಬಿಡಾರಕ್ಕೆ ಕರೆತರಲಾಗುತ್ತದೆ ಎಂದರು.
ಅಂಬಾರಿ ಹೊತ್ತ ಆನೆ ಜೊತೆಗೆ ಫೋಟೊ
ಲೋಗೊ ಬಿಡುಗಡೆ ಬಳಿಕ ಸಕ್ರೆಬೈಲು ಆನೆ ಬಿಡಾರ ವೀಕ್ಷಿಸಿದ ಸಂಸದ ರಾಘವೇಂದ್ರ, ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತ ಸಾಗರ್ ಆನೆಯ ಆಶೀರ್ವಾದ ಪಡೆದರು. ಸಾಗರ್ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200