SHIVAMOGGA LIVE NEWS | 2 FEBRUARY 2024
SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವವ ರಾಜ್ಯದ ವಿವಿಧೆಡೆಯ ತಹಶೀಲ್ದಾರ್ಗಳನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ಗಳು ಕೂಡ ವರ್ಗವಾಗಿದ್ದಾರೆ.
ಯಾರೆಲ್ಲರ ವರ್ಗವಾಗಿದೆ?
ಜಗಳೂರು ತಹಶೀಲ್ದಾರ್ ಕಲೀಂ ಉಲ್ಲಾ ಅವರನ್ನು ಸಾಗರ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ.
ಸಾಗರ ತಾಲೂಕು ತಹಶೀಲ್ದಾರ್ ಚಂದ್ರಶೇಖರ ನಾಯ್ಕ ಅವರನ್ನು ದಾವಣಗೆರೆ ಜಿಲ್ಲೆ ಜಗಳೂರಿಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ಡಾ. ಎನ್.ಜೆ. ನಾಗರಾಜ್ ಅವರನ್ನು ಹಾವೇರಿ ತಾಲೂಕಿಗೆ ವರ್ಗಾಯಿಸಲಾಗಿದೆ.
ಮೈಸೂರಿನ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಶಿವಮೊಗ್ಗ ತಾಲೂಕಿಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ – ಡಿವೈಎಸ್ಪಿಗಳ ವರ್ಗಾವಣೆ, ಜಿಲ್ಲೆಯಲ್ಲಿ ಯಾರೆಲ್ಲರ ವರ್ಗವಾಗಿದೆ? ತಿರುಮಲೇಶ್ ವರ್ಗಾವಣೆ ರದ್ದಾಗಿದ್ದೇಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200