ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021
ರಾಜ್ಯ ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಇದರ ಬೆನ್ನಿಗೆ ಶಿವಮೊಗ್ಗದಲ್ಲೂ ಲಾಕ್ ಡೌನ್ ವಿಸ್ತರಣೆ ಕುರಿತು ಚರ್ಚೆ ಆರಂಭವಾಗಿದೆ. ಇವತ್ತು ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ. ಆ ಬಳಿಕ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಕುರಿತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ಇವತ್ತು ಮಹತ್ವದ ಸಭೆ ನಡೆಯಲಿದೆ.
ಮತ್ತೊಂದೆಡೆ ತೀರ್ಥಹಳ್ಳಿಯಲ್ಲೂ ಇವತ್ತು ವರ್ತಕರು, ಅಧಿಕಾರಿಗಳ ಜೊತೆಗೆ ಶಾಸಕ ಆರಗ ಜ್ಞಾನೇಂದ್ರ ಸಭೆ ನಡೆಸಲಿದ್ದಾರೆ. ಜೂನ್ 7ರ ಬಳಿಕ ಲಾಕ್ ಡೌನ್ ಹೇಗಿರಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯಾದ್ಯಂತ ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]