ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಭೇಟಿಯಾದ ಶಿವಮೊಗ್ಗ ಎಂಎಲ್‌ಎ, 3 ಬೇಡಿಕೆಗಳ ಮನವಿ ಸಲ್ಲಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

BENGALURU : ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ ಇವತ್ತು ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಮೂರು ಪ್ರಮುಖ ಬೇಡಿಕೆಗಳ (Demands) ಮನವಿ ಸಲ್ಲಿಸಿದರು.

ಎಂಎಲ್‌ಎ ಮೂರು ಬೇಡಿಕೆಗಳು ಏನು?

ಬೇಡಿಕೆ 1 : ಶಿವಮೊಗ್ಗ ನಗರದ ಮದರಿಪಾಳ್ಯದ ಶ್ರೀ ಕಲ್ಲೇಶ್ವರ ದೇವಸ್ಥಾನದ ಪಕ್ಕ ತುಂಗಾ ನದಿಯ ಪ್ರವಾಹದಿಂದ ಆಸ್ತಿಪಾಸ್ತಿ, ಮನೆಗಳು ಹಾನಿಗೀಡಾಗುತ್ತಿವೆ. ಆದ್ದರಿಂದ ತುಂಗಾ ನದಿಯ ಬಲದಂಡೆಗೆ ಸುಮಾರು 100 ಮೀಟರ್ ಉದ್ದಕ್ಕೆ ರಕ್ಷಣಾ ಗೋಡೆ ನಿರ್ಮಾಣಕ್ಕೆ ಕರ್ನಾಟಕ ನೀರಾವರಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು.

shimoga-mla-meets-deputy-cm-dk-shivakumar.

ಬೇಡಿಕೆ 2 : ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ನೀರು ಕೆರೆ ಕಟ್ಟೆ ತುಂಬಿ ಭದ್ರಾ ಎಡದಂಡೆ ಕಾಲುವೆ ಮೂಲಕ ಹರಿಯುತ್ತದೆ. ಈ ನೀರು ಶಿವಮೊಗ್ಗ ನಗರದ ಅನೇಕ ಬಡಾವಣೆಗಳಿಗೆ ನುಗ್ಗಿ ಪ್ರವಾಹ ಉಂಟಾಗುತ್ತಿದೆ. ಹೆಚ್ಚುವರಿ ನೀರು ಹೊರಗೆ ಹರಿದು ಬಿಡಲು ಬೀಡು ಗುಂಡಿಗಳು ಇಲ್ಲ. ಆದ್ದರಿಂದ ಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಬೀಡು ಗುಂಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು.

ಬೇಡಿಕೆ 3 : ತುಂಗಾ ಮೇಲ್ದಂಡೆ ಯೋಜನೆಯ ನಿಗಮದ ಜಾಗವನ್ನು ಒತ್ತುವರಿ ಮಾಡಿ, ಕಬಳಿಸುವ ಪ್ರಯತ್ನವಾಗುತ್ತಿದೆ. ಆದ್ದರಿಂದ 22 ಕಿ.ಮೀ ತಂತಿ ಬೇಲಿ ಹಾಕುವ ಕಾಮಗಾರಿಗೆ ಅನುದಾನ ಬಿಡುಗಡೆ ಮನವಿ ಮಾಡಲಾಯಿತು.

ಇದನ್ನೂ ಓದಿ ⇓

ರೈಲ್ವೆ ಹಳಿ ಮೇಲೆ ಬಿದ್ದ ಬೃಹತ್‌ ಮರ, ಎರಡು ಗಂಟೆ ನಡು ದಾರಿಯಲ್ಲೇ ನಿಂತ ತಾಳಗುಪ್ಪ ಇಂಟರ್‌ಸಿಟಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment