SHIVAMOGGA LIVE NEWS | 18 JULY 2024
BENGALURU : ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಇವತ್ತು ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮೂರು ಪ್ರಮುಖ ಬೇಡಿಕೆಗಳ (Demands) ಮನವಿ ಸಲ್ಲಿಸಿದರು.
ಎಂಎಲ್ಎ ಮೂರು ಬೇಡಿಕೆಗಳು ಏನು?
ಬೇಡಿಕೆ 1 : ಶಿವಮೊಗ್ಗ ನಗರದ ಮದರಿಪಾಳ್ಯದ ಶ್ರೀ ಕಲ್ಲೇಶ್ವರ ದೇವಸ್ಥಾನದ ಪಕ್ಕ ತುಂಗಾ ನದಿಯ ಪ್ರವಾಹದಿಂದ ಆಸ್ತಿಪಾಸ್ತಿ, ಮನೆಗಳು ಹಾನಿಗೀಡಾಗುತ್ತಿವೆ. ಆದ್ದರಿಂದ ತುಂಗಾ ನದಿಯ ಬಲದಂಡೆಗೆ ಸುಮಾರು 100 ಮೀಟರ್ ಉದ್ದಕ್ಕೆ ರಕ್ಷಣಾ ಗೋಡೆ ನಿರ್ಮಾಣಕ್ಕೆ ಕರ್ನಾಟಕ ನೀರಾವರಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು.
ಬೇಡಿಕೆ 2 : ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ನೀರು ಕೆರೆ ಕಟ್ಟೆ ತುಂಬಿ ಭದ್ರಾ ಎಡದಂಡೆ ಕಾಲುವೆ ಮೂಲಕ ಹರಿಯುತ್ತದೆ. ಈ ನೀರು ಶಿವಮೊಗ್ಗ ನಗರದ ಅನೇಕ ಬಡಾವಣೆಗಳಿಗೆ ನುಗ್ಗಿ ಪ್ರವಾಹ ಉಂಟಾಗುತ್ತಿದೆ. ಹೆಚ್ಚುವರಿ ನೀರು ಹೊರಗೆ ಹರಿದು ಬಿಡಲು ಬೀಡು ಗುಂಡಿಗಳು ಇಲ್ಲ. ಆದ್ದರಿಂದ ಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಬೀಡು ಗುಂಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು.
ಬೇಡಿಕೆ 3 : ತುಂಗಾ ಮೇಲ್ದಂಡೆ ಯೋಜನೆಯ ನಿಗಮದ ಜಾಗವನ್ನು ಒತ್ತುವರಿ ಮಾಡಿ, ಕಬಳಿಸುವ ಪ್ರಯತ್ನವಾಗುತ್ತಿದೆ. ಆದ್ದರಿಂದ 22 ಕಿ.ಮೀ ತಂತಿ ಬೇಲಿ ಹಾಕುವ ಕಾಮಗಾರಿಗೆ ಅನುದಾನ ಬಿಡುಗಡೆ ಮನವಿ ಮಾಡಲಾಯಿತು.
ಇದನ್ನೂ ಓದಿ ⇓
ರೈಲ್ವೆ ಹಳಿ ಮೇಲೆ ಬಿದ್ದ ಬೃಹತ್ ಮರ, ಎರಡು ಗಂಟೆ ನಡು ದಾರಿಯಲ್ಲೇ ನಿಂತ ತಾಳಗುಪ್ಪ ಇಂಟರ್ಸಿಟಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200