ಶಿವಮೊಗ್ಗ : ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ (Terrorist) ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ವಿಜಯನಗರದ ನಿವಾಸಿ ಮಂಜುನಾಥ್ ಮೃತಪಟ್ಟಿದ್ದಾರೆ.
ಮಂಜುನಾಥ್ ಅವರು ಪತ್ನಿ ಮತ್ತು ಪುತ್ರನೊಂದಿಗೆ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇವತ್ತು ಕಾಶ್ಮೀರದ ಪಾಲಗಾಂನಲ್ಲಿ ಭಯೋತ್ಪದನಾ ದಾಳಿ ನಡೆದಿದ್ದು, ಈ ವೇಳೆ ಮಂಜುನಾಥ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅವರ ಪತ್ನಿ, ದಾಳಿ ವೇಳೆ ತಮ್ಮ ಪತಿ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್ ಪರ ಮತ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200