ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್ ನಿವಾಸಕ್ಕೆ ತುಮಕೂರು ಜಿಲ್ಲೆ ತಿಪಟೂರಿನ 103 ವರ್ಷದ ವೃದ್ಧೆ (Lady) ಶಿವಮ್ಮ, ಕುಟುಂಬದವರಿಗೆ ಸಾಂತ್ವನ ಹೇಳಿದರು.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್‌ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ

ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಕೃತ್ಯದ ಬಗ್ಗೆ ಹಾಗೂ ಮಂಜುನಾಥ ರಾವ್ ಅವರ ಸಾವಿನ ಬಗ್ಗೆ ಟಿ.ವಿಯಲ್ಲಿ ನೋಡಿ ತಿಳಿದಿದ್ದೆ. ದೇಶದ ಸೈನಿಕರಿಗೆ ಬಲ ತುಂಬುವುದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಉದ್ದೇಶದಿಂದ ಇಲ್ಲಿಗೆ ಬಂದಿರುವೆ ಎಂದು ಶಿವಮ್ಮ ಮಾಧ್ಯಮದವರಿಗೆ ತಿಳಿಸಿದರು.

ಪಾಕಿಸ್ತಾನಕ್ಕೆ ತಕ್ಕ ಉತ್ತರ ಕೊಡಬೇಕು. ನಮ್ಮ ಸೈನಿಕರಿಗೆ ಮಾದೇಶ್ವರ ಹಾಗೂ ಮಂಜುನಾಥ ಸ್ವಾಮಿ ಶಕ್ತಿ ನೀಡಲಿ ಎಂದು ಶಿವಮ್ಮ ಆಶಿಸಿದರು. ವೃದ್ಧೆ ಪುತ್ರನೊಂದಿಗೆ ಬಸ್‌ನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು.

103-years-old-lady-visits-Manjunataha-Rao-house-in-Shimoga

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

Leave a Comment