ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೋವಿಡ್ 19 ಲಾಕ್ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜ್ನ ಪರಿಹಾರ ಈಗಾಗಲೇ ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್ನ ಪರಿಹಾರದ ಮೊತ್ತ ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕೇಂದ್ರದ ಪರಿಹಾರದಿಂದ ಲಾಭ ಪಡೆದುಕೊಂಡಿವೆ ಎಂದು ತಿಳಿಸಿದರು.
ಶಿವಮೊಗ್ಗ 107 ಕೋಟಿ ರೂ.
ಶಿವಮೊಗ್ಗದಲ್ಲಿ 32 ಬ್ಯಾಂಕ್ಗಳ ಮೂಲಕ 5100 ಖಾತೆದಾರರಿಗೆ 107 ಕೋಟಿ ರೂ. ಪರಿಹಾರದ ಹಣ ಬಂದಿದೆ ಎಂದು ಸಂಸದ ರಾಘವೇಂದ್ರ ಸ್ಪಷ್ಟಪಡಿಸಿದರು. 4.58 ಲಕ್ಷ ಜನ್ ಧನ್ ಬ್ಯಾಂಕ್ ಖಾತೆದಾರರು ಕೇಂದ್ರ ಸರ್ಕಾರದ ನೆರವು ಪಡೆದುಕೊಳ್ಳಲು ಸಾದ್ಯವಾಗಿದೆ ಎಂದು ತಿಳಿಸಿದರು.
ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ, ಎಪಿಎಂಸಿ ಮಾಜಿ ಅಧ್ಯಕ್ಷ ಜ್ಯೋತಿ ಪ್ರಕಾಶ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪ್ರಮುಖರಾದ ಗಿರೀಶ್ ಪಟೇಲ್, ಮಾಲತೇಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






