SHIVAMOGGA LIVE NEWS | 6 OCTOBER 2023
SHIMOGA : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆಗಳಲ್ಲಿ ಜಾರಿ ನಿರ್ದೇಶನಲಾಯದ (ED raid) ಅಧಿಕಾರಿಗಳು ಸುಮಾರು 11 ಗಂಟೆ ಪರಿಶೀಲನೆ ನಡೆಸಿದರು. ಗುರುವಾರ ಬೆಳಗ್ಗೆ 6.30ರಿಂದ ಸಂಜೆ 5 ಗಂಟೆವರೆಗೆ ಪರಿಶೀಲನೆ ನಡೆಸಿದ್ದಾರೆ.
ತೀರ್ಥಹಳ್ಳಿಯ ಬೆಟ್ಟಮಕ್ಕಿ, ಕರಕುಚ್ಚಿ ಮತ್ತು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆಗಳಲ್ಲಿ ಇಡಿ ಅಧಿಕಾರಿಗಳು (ED raid) ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೆ ಅಕ್ರಮ ಆಸ್ತಿ, ಹಣ ಪತ್ತೆಯಾಗಿಲ್ಲ ಎಂದು ಪ್ರಮಾಣ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಡಿ ಅಧಿಕಾರಿಗಳ ದಾಳಿ ವೇಳೆ ಮಂಜುನಾಥಗೌಡ ಮತ್ತು ಅವರ ಕುಟುಂಬದವರು ಮನೆಗಳಲ್ಲಿ ಇರಲಿಲ್ಲ. ಆದ್ದರಿಂದ ಮನೆಯಲ್ಲಿದ್ದ ಸಹಾಯಕರ ನೆರವಿನಿಂದ ಪರಿಶೀಲನೆ ನಡೆಸಲಾಯಿತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200