ಶಿವಮೊಗ್ಗ: ಕೋಟೆ ಮಾರಿಕಾಂಬ ಜಾತ್ರೆಯಲ್ಲಿ ಕುಟುಂಬದಿಂದ ಬೇರ್ಪಟ್ಟು ಕಳೆದುಹೋಗಿದ್ದ 80 ವರ್ಷದ ಮಹಿಳೆಯನ್ನು 112 ತುರ್ತು ಸ್ಪಂದನಾ ಪೊಲೀಸ್ (112 police) ಸಿಬ್ಬಂದಿ ಪತ್ತೆಹಚ್ಚಿ, ವಾಹನದಲ್ಲಿ ಅವರ ಮನೆಗೆ ಸುರಕ್ಷಿತವಾಗಿ ತಲುಪಿಸಿದ್ದಾರೆ.
ಶುಕ್ರವಾರ ಮಧ್ಯರಾತ್ರಿ 12:30ರ ಹೊತ್ತಿಗೆ ವೃದ್ಧೆ ತಮ್ಮ ಸಂಬಂಧಿಕರೊಂದಿಗೆ ಮಾರಿಕಾಂಬಾ ಜಾತ್ರೆಗೆ ಬಂದಿದ್ದರು. ಆದರೆ ಜನದಟ್ಟಣೆಯ ನಡುವೆ ಅವರು ತಮ್ಮ ಕುಟುಂಬದವರಿಂದ ಬೇರ್ಪಟ್ಟು ದಾರಿ ತಪ್ಪಿದ್ದರು. ಈ ಬಗ್ಗೆ ಕುಟುಂಬದವರು 112ಗೆ ಮಾಹಿತಿ ನೀಡಿದ್ದರು.
ಕೂಡಲೇ ಕಾರ್ಯಪ್ರವೃತ್ತರಾದ ಇ.ಆರ್.ವಿ ಸಿಬ್ಬಂದಿ ಕೋಟೆ ಪೊಲೀಸ್ ಠಾಣೆಯ ಸಿಪಿಸಿ ಗಿರೀಶ್ ಮತ್ತು ಡಿ.ಎ.ಆರ್ ಶಿವಮೊಗ್ಗದ ಎ.ಹೆಚ್.ಸಿ ಚರಣ್ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಜಾತ್ರೆಯಲ್ಲಿ ಹುಡುಕಾಟ ನಡೆಸಿ ವೃದ್ಧೆಯನ್ನು ಪತ್ತೆಹಚ್ಚಿದ್ದಾರೆ. ಅಲ್ಲದೆ ವಿಳಾಸವನ್ನು ಖಚಿತಪಡಿಸಿಕೊಂಡ ಪೊಲೀಸ್ ಸಿಬ್ಬಂದಿ, ಅವರನ್ನು ಇ.ಆರ್.ವಿ ವಾಹನದಲ್ಲಿಯೇ ಕರೆದೊಯ್ದು ಮನೆಗೆ ಬಿಟ್ಟು ಬಂದಿದ್ದಾರೆ. ಪೊಲೀಸರ ಕಾರ್ಯಕ್ಕೆ ವೃದ್ಧೆಯ ಕುಟುಂಬದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ