ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಸಿಆರ್’ಪಿಸಿ ಸೆಕ್ಷನ್ 144 ಅನ್ವಯ ವಿಧಿಸಲಾಗಿದ್ದ ನಿಷೇಧಾಜ್ಞೆ ಅಂತ್ಯಗೊಂಡಿದೆ. ಶಿವಮೊಗ್ಗ ನಗರ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ.
ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಫೆ.8ರ ಮಧ್ಯಾಹ್ನದಿಂದ ಫೆ.9ರ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಿ ತಹಶೀಲ್ದಾರ್ ಡಾ.ನಾಗರಾಜ್ ಅವರು ಆದೇಶ ಹೊರಡಿಸಿದ್ದರು. ಕಳೆದ ರಾತ್ರಿಗೆ ನಿಷೇಧಾಜ್ಞೆ ಅವಧಿ ಮುಗಿದಿದೆ.
ಸಹಜ ಸ್ಥಿತಿಗೆ ಶಿವಮೊಗ್ಗ
ಪ್ರತಿಭಟನೆಯಿಂದ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಫೆ.8ರಂದು ಶಿವಮೊಗ್ಗ ನಗರದಲ್ಲಿ ಅಂಗಡಿಗಳನ್ನ ಬಂದ್ ಮಾಡಿಸಲಾಗಿತ್ತು. ಜನ ಸಂಚಾರವು ಕಡಿಮೆಯಾಗಿತ್ತು. ವಿವಿಧೆಡೆ ಪೊಲೀಸರು ತಪಾಸಣೆ ಕೈಗೊಂಡಿದ್ದರು. ಬುಧವಾರ ಶಿವಮೊಗ್ಗ ನಗರ ಬಹುತೇಕ ಸಹಜ ಸ್ಥಿತಿಗೆ ಮರಳಿತ್ತು. ನಿಷೇಧಾಜ್ಞೆ ಇದ್ದಿದ್ದರಿಂದ ಗುಂಪು ಸೇರುವಂತಿರಲಿಲ್ಲ. ನಿಷೇಧಾಜ್ಞೆ ಅವಧಿ ಮುಗಿದಿರುವುದರಿಂದ ಇವತ್ತು ನಗರ ಸಹಜ ಸ್ಥಿತಿಗೆ ಬರಲಿದೆ.
ಪೊಲೀಸರಿಂದ ರೂಟ್ ಮಾರ್ಚ್
ಮತ್ತೊಂದೆಡೆ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಶಿವಮೊಗ್ಗ ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಯಿತು. ಬುಧವಾರ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು.
ಶಾಲೆ, ಕಾಲೇಜು ರಜೆಯಿಂದ ವಾತಾವರಣ ತಿಳಿ
ಸಂಘರ್ಷದಿಂದಾಗಿ ಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ. ಶುಕ್ರವಾರದವರೆಗೆ ರಜೆ ಇದೆ. ಹಾಗಾಗಿ ವಾತಾವರಣ ತಿಳಿಯಾಗಿದೆ. ಶನಿವಾರದಿಂದ ಪುನಃ ತರಗತಿಗಳು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ | ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?
Shimoga District Profile | About Shivamogga Live | Shimoga Live News Whatsapp 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200