SHIVAMOGGA LIVE NEWS | 4 OCTOBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ರಾಗಿ ಗುಡ್ಡ (ragi gudda) ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲಾ, ಕಾಲೇಜು, ಕಚೇರಿಗೆ ತೆರಳಲು ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಆದರೆ ಸೆಕ್ಷನ್ 144ರ (144 Section) ಅನ್ವಯ ನಿಷೇಧಾಜ್ಞೆ ಮುಂದುವರೆದಿದೆ.
ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡ ಬಡಾವಣೆಯಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು ಜನರು ಮನೆಯಿಂದ ಹೊರಗೆ ಬಾರದಂತೆ ಪೊಲೀಸರು ನಿರ್ಬಂಧಿಸಿದ್ದರು. ಈಗ ರಾಗಿಗುಡ್ಡ ಸಹಜ ಸ್ಥಿತಿಗೆ ಮರಳುತ್ತಿದೆ.
ಇದನ್ನೂ ಓದಿ- ರಾಗಿಗುಡ್ಡದಲ್ಲಿ ಕಟೌಟ್ ವಿಚಾರವಾಗಿ ಗೊಂದಲ, ಸ್ಥಳಕ್ಕೆ ಎಸ್ಪಿ ಭೇಟಿ, ಪರಿಸ್ಥಿತಿ ಶಾಂತ, ಏನೇನಾಯ್ತು?
ಶಾಲೆ, ಕಾಲೇಜು, ಕಚೇರಿಯತ್ತ
ರಾಗಿಗುಡ್ಡ ಬಡಾವಣೆಯಲ್ಲಿ ಸುಖಾಸುಮ್ಮನೆ ಜನರ ಓಡಾಟಕ್ಕೆ ಈಗಲು ನಿರ್ಬಂಧವಿದೆ. ಆದರೆ ಶಾಲೆ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ, ಕೆಲಸಗಳಿಗೆ ತೆರಳುವವರಿಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮುಂಗಟ್ಟು ತೆರೆದಿದ್ದು ಅಗತ್ಯ ವಸ್ತುಗಳ ಖರೀದಿ ಮಾಡಲಾಗುತ್ತಿದೆ. ನಿಧಾನವಾಗಿ ರಾಗಿಗುಡ್ಡ ಬಡಾವಣೆ ಸಹಜ ಸ್ಥಿತಿಗೆ ಮರಳುತ್ತಿದೆ.
ಇದನ್ನೂ ಓದಿ- ‘ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ’, ಕಲ್ಲು ತೂರಾಟ ಕೇಸ್ನಲ್ಲಿ ಈತನಕ ಅರೆಸ್ಟ್ ಆದವರೆಷ್ಟು?
ಮುಂದುವರೆದ ಬಂದೋಬಸ್ತ್
ಇನ್ನು, ನಿಷೇಧಾಜ್ಞೆ ಜಾರಿಯಲ್ಲಿ ಇರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಕೆಎಸ್ಆರ್ಪಿ ಮತ್ತು ಡಿಎಆರ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರಾಗಿಗುಡ್ಡ ಬಡಾವಣೆಗೆ ಪ್ರವೇಶಿಸುವ ಪ್ರತಿ ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ. ಸುಖಾಸುಮ್ಮನೆ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






