ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ರಚಿಸಿರುವ ಸಮಿತಿಯನ್ನು ಹದಿನೈದು ದಿನದಲ್ಲಿ ಕೈಬಿಡಬೇಕು. ಇಲ್ಲವಾದರೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.
ಶಿವಮೊಗ್ಗದ ಈಡಿಗರ ಸಮುದಾಯ ಭವನದಲ್ಲಿ ನಡೆದ ಸಿಗಂದೂರು ದೇವಸ್ಥಾನ ಉಳಿಸಿ ಹೋರಾಟ ಸಮಿತಿಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುತ್ತದೆ. ಈ ಸಂಬಂಧ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರೊಂದಿಗೆ ಹೋರಾಟದ ರೂಪುರೇಷೆ ಕುರಿತು ಚರ್ಚಿಸುತ್ತೇವೆ ಎಂದರು.
VIDEO REPORT
ಸರ್ವ ಜಾತಿ, ಸಮುದಾಯದವರು ಭಾಗಿ
ಹೋರಾಟ ಸಮಿತಿ ಸಭೆಯಲ್ಲಿ ಇವತ್ತು ಪ್ರಮುಖ ಸಂಘಟನೆಗಳು, ಜಾತಿ ಸಂಘಟನೆಗಳ ಮುಖಂಡರು, ಸದಸ್ಯರು ಪಾಲ್ಗೊಂಡಿದ್ದರು. ಎಲ್ಲರ ಅಭಿಪ್ರಾಯ ಪಡೆದ ಸಮಿತಿ ಮುಖಂಡರು, ಹೋರಾಟ ಮತ್ತು ಗುಡುವಿನ ಕುರಿತು ಅಂತಿಮ ನಿರ್ಣಯ ಕೈಗೊಂಡರು.
ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಧು ಬಂಗಾರಪ್ಪ, ಶಾರದಾ ಪೂರ್ಯನಾಯ್ಕ್, ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಪ್ರಮುಖರಾದ ಸತ್ಯಜಿತ್ ಸೂರತ್ಕಲ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]