Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?

ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?

24/05/2022 8:46 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | FIRE DEPARTMENT | 24 ಮೇ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಭಾರಿ ಮಳೆ. ಚರಂಡಿಗಳು ತುಂಬಿ ರಸ್ತೆಗಳು ಜಲಾವೃತವಾಗಿತ್ತು. ಮನೆಗಳಿಗೂ ನೀರು ನುಗ್ಗಿತ್ತು. ಮನೆ ಒಳಗಿದ್ದವರಿಗೆ ಹೊರಗೆ ಬರಲು ಭಯ. ಒಳಗಿರಲು ಆತಂಕ. ಇಂತಹ ಸಂದರ್ಭ ಜನರ ನೆರವಿಗೆ ಬಂದಿದ್ದೆ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ.

ಮೇ 19ರಂದು ಶಿವಮೊಗ್ಗ ನಗರ ಅಕ್ಷರಶಃ ಮುಳುಗಿತ್ತು. ಸ್ಮಾರ್ಟ್ ಸಿಟಿ ಅವಾಂತರ, ಪಾಲಿಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ನಗರದ ಬಹು ಬಡಾವಣೆಗಳು ಜಲಾವೃತವಾಗಿದ್ದವು. ಇಂತಹ ಸಂದರ್ಭ ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು, ಹಗಲು, ರಾತ್ರಿ ಕೆಲಸ ಮಾಡಿದರು. 150ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು.

Shimoga Fire Department

ಹಸುಗೂಸಿನಿಂದ ವಯೋವೃದ್ಧರತನಕ

ಮೇ 19 ಬೆಳಗ್ಗೆ 10.30ಕ್ಕೆ ಆರ್.ಎಂ.ಎಲ್ ನಗರದ ಎರಡು ಕಡೆ ಮೊದಲ ರಕ್ಷಣಾ ಕಾರ್ಯಾಚರಣೆ ನಡೆಸಿಲಾಯಿತು. 25 ಜನರನ್ನು ರಕ್ಷಣೆ ಮಾಡಲಾಯಿತು. ಆ ಬಳಿಕ ಸುಮಾರು 15 ಕಡೆ ಅಗ್ನಿಶಾಮಕ ಸಿಬ್ಬಂದಿ ರೆಸ್ಕ್ಯೂ ಆಪರೇಷನ್ ನಡೆಸಿದರು.

ಗೋಪಾಲಗೌಡ ಬಡಾವಣೆ, ಶರಾವತಿ ನಗರ, ಮಿಳಘಟ್ಟ, ಗಾಂಧಿ ನಗರ, ಹೊಸಮನೆ, ವೆಂಕಟೇಶ ನಗರ, ಲಕ್ಷ್ಮೀ ಟಾಕೀಸ್ ಬಳಿ, ವಿದ್ಯಾನಗರದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿದರು. ಈ ವೇಳೆ ಹಸುಗೂಸಿನಿಂದ ವಯೋವೃದ್ಧರ ತನಕ 150ಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದರು.

ಆರ್.ಎಂ.ಎಲ್ ನಗರದಲ್ಲಿ ಜಲಾವೃತವಾಗಿದ್ದ ಮನೆಯಿಂದ 90 ವರ್ಷದ ಅಬ್ದುಲ್ ಅಜೀಜ್ ಖಾನ್ ಎಂಬುವವರ ರಕ್ಷಣೆ ಮಾಡಲಾಯಿತು. ಅವರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲಾಯಿತು. ಗೋಪಾಲ ಗೌಡ ಬಡಾವಣೆಯಲ್ಲಿ ವೃದ್ಧೆಯೊಬ್ಬರನ್ನು ರಕ್ಷಿಸಲಾಯಿತು.

ಅದೆ ದಿನ ರಾತ್ರಿ ವಿದ್ಯಾನಗರದಲ್ಲಿ ನವಜಾತ ಶಿಶು ಮತ್ತು ಬಾಣಂತಿಯ ರಕ್ಷಣಾ ಕಾರ್ಯ ನಡೆಸಲಾಯಿತು. ಇವರನ್ನು ಸುರಕ್ಷಿತವಾಗಿ ಬಡಾವಣೆಯಿಂದ ಹೊರಗೆ ಕರೆತರಲಾಯಿತು.

ಜೋರು ಮಳೆ, ಗುಂಡಿಗಳು, ನೀರು

ನಿರಂತರ ಮಳೆ ನಡುವೆ ಅಗ್ನಿಶಾಮಕ ಸಿಬ್ಬಂದಿಗೆ ಸವಾಲೆನಿಸಿದ್ದು ಸ್ಮಾರ್ಟ್ ಸಿಟಿ ಗುಂಡಿಗಳು. ಯಾವ ಬಡಾವಣೆಯಲ್ಲಿ ಎಲ್ಲಿ ಗುಂಡಿ ತೋಡಲಾಗಿದೆ ಅನ್ನುವುದರ ಖಚಿತೆತೆ ಇರಲಿಲ್ಲ. ಹಾಗಾಗಿ ಪ್ರತಿ ಹೆಜ್ಜೆ ಇಡುವಾಗಲು ಮುನ್ನೆಚ್ಚರಿಕೆ ವಹಿಸುತ್ತಿದ್ದರು. ಪ್ರತಿದಿನ ಓಡಾಡುತ್ತಿದ್ದ ರಸ್ತೆಯಲ್ಲಿ ಹೆಜ್ಜೆ ಇಡಲು ಜನರೆ ಹೆದರುತ್ತಿದ್ದ ಸಂದರ್ಭದಲ್ಲೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಕೆಲವು ಕಡೆ ಜನರನ್ನು ಎತ್ತಿಕೊಂಡು ಬಂದು ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. ಇನ್ನೂ ಕೆಲವು ಕಡೆ ಹಗ್ಗ ಬಳಸಿ ಜನರ ರಕ್ಷಣೆ ಮಾಡಿದರು.

Shimoga Fire Department

ಗೋಪಾಲಗೌಡ ಬಡಾಣೆಯಲ್ಲಿ ಜಲಾವೃತವಾಗಿದ್ದ ರಸ್ತೆಯಲ್ಲಿ ತೆರಳುತ್ತಿದ್ದ ಕಾರು ಆಫ್ ಆಗಿತ್ತು. ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದರಿಂದ ಕಾರಿನಲ್ಲಿದ್ದವರು ಕೆಳಗಿಳಿಯಲು ಹೆದರುತ್ತಿದ್ದರು. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ರೆಸ್ಕ್ಯೂ ಆಪರೇಷನ್ ನಡೆಸಿದರು. ಹಗ್ಗದ ಸಹಾಯದಿಂದ ಕಾರಿನಲ್ಲಿದ್ದವರನ್ನ ಕಾಪಾಡಿದರು.

Shimoga Fire Department

ಪ್ರಾಣಿಗಳನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ

ಇನ್ನು, ಶಿವಮೊಗ್ಗದ ಸೋಮಿನಕೊಪ್ಪ ಕೆರೆಯ ನಡುಗಡ್ಡೆಯಲ್ಲಿ ಕುದುರೆ ಗುಂಪೊಂದು ಸಿಕ್ಕಿಬಿದ್ದಿದ್ದವು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮಾಡಿ 13 ಕುದುರೆಗಳ ರಕ್ಷಣೆ ಮಾಡಿದರು. ಎರಡು ದಿನಗಳಿಂದ ಆಹಾರವಿಲ್ಲದೆ ಕುದುರೆಗಳು ನಡುಗಡ್ಡೆಯಲ್ಲಿ ಸಿಕ್ಕಿಬಿದ್ದಿದ್ದವು. ಅವುಗಳ ರಕ್ಷಣೆ ಮಾಡಿ ಕರ್ತವ್ಯ ಪಜ್ಞೆ ಜೊತೆಗೆ ಮಾನವೀಯತೆ ಮರೆದಿದ್ದಾರೆ.

Shimoga Nanjappa Hospital

ಅಗ್ನಿಶಾಮಕ ಸಿಬ್ಬಂದಿ ಚಾಕಚಕ್ಯತೆ ಮತ್ತು ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಸಾವು ನೋವಿನ ಆತಂಕವು ದೂರಾಗಿದೆ. ಶಿವಮೊಗ್ಗದ ಜಲಾವೃತವಾಗಿದ್ದಾಗ ಜೀವದ ಹಂಗು ತೊರೆದು 150ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಿದ್ದಾರೆ. ಇವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ – ವಿದ್ಯಾನಗರದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ, ಬಾಣಂತಿ, ನವಜಾತ ಶಿಶು ಸುರಕ್ಷಿತ ಸ್ಥಳಕ್ಕೆ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Police-Search-Operation-in-Tunga-River ಶಿವಮೊಗ್ಗ ತುಂಗಾ ಸೇತುವೆ ಕೆಳಗೆ ಪೊಲೀಸರಿಂದ ದಿಢೀರ್ ಶೋಧ | VIDEO NEWS
Next Article Youth-Body-Found-in-tunga-River ಶಿವಮೊಗ್ಗ ತುಂಗಾ ನದಿ ಸೇತುವೆ ಕೆಳಗೆ ಯುವಕನ ಮೃತದೇಹ ಪತ್ತೆ

ಇದನ್ನೂ ಓದಿ

government-employees-state-level-sports-at-nehru-stadium
SHIVAMOGGA CITY

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಗೆಲ್ಲುವ ಛಲದೊಂದಿಗೆ ಅಖಾಡಕ್ಕಿಳಿದ ಸರ್ಕಾರಿ ನೌಕರರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
stop-sand-mining-at-kudli-in-shimoga
SHIVAMOGGA CITY

ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
HIVAMOGGA-NEWS- map
SHIVAMOGGA CITY

ಐಟಿಐ ಪಾಸ್‌ ಆದವರಿಗೆ ಹೆಚ್‌ಎಎಲ್‌ನಲ್ಲಿ ಅಪ್ರೆಂಟಿಸ್‌ ತರಬೇತಿ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
SHIMOGA-NEWS-UPDATE
SHIVAMOGGA CITY

ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?