ಶಿವಮೊಗ್ಗ ಜಿಲ್ಲೆಯಾದ್ಯಂತ ಶೇ.20ರಷ್ಟು ಮಳೆ ಹೆಚ್ಚಳ, 163 ಗ್ರಾಮ, 18 ಮುಖ್ಯ ರಸ್ತೆಯಲ್ಲಿ ಅತಿವೃಷ್ಟಿ ಸಂಭವ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JUNE 2021

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಮುಂಗಾರು ಮಳೆ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್‍ನಲ್ಲಿ  ಭಾಗವಹಿಸಿದ ಜಿಲ್ಲಾಧಿಕಾರಿ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಶೇ.20ರಷ್ಟು ಹೆಚ್ಚು ಮಳೆ

ಜಿಲ್ಲೆಯಲ್ಲಿ ಕಳೆದ 18 ದಿನಗಳಲ್ಲಿ ಸರಾಸರಿಗಿಂತ ಶೇ.20ರಷ್ಟು ಹೆಚ್ಚಿನ ಮಳೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ. ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ. 67 ಗ್ರಾಮ ಪಂಚಾಯತ್‍ಗಳ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು ಹಾಗೂ 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದು ಹೇಳಿದರು.

Nammur News For Website 2 1 1 1

ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇರುವುದಿಲ್ಲ. 26459 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು, 30242 ಕ್ವಿಂಟಾಲ್ ದಾಸ್ತಾನಿದೆ. ಎಲ್ಲಾ ಕಡೆ ಕೃಷಿ ಚಟುವಟಿಕೆ ಆರಂಭವಾಗಿದ್ದು, ಈಗಾಗಲೇ 3341 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ರಸಗೊಬ್ಬರವನ್ನು ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ದಾಸ್ತಾನು ಮಾಡಲಾಗುತ್ತಿದೆ. ಜೂನ್ ಅಂತ್ಯದವರೆಗೆ 52ಸಾವಿರ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರ ಬೇಡಿಕೆ ಇದ್ದು, 1.07 ಮೆ.ಟನ್ ದಾಸ್ತಾನಿದೆ ಎಂದು ತಿಳಿಸಿದರು.

201421733 1138954733251102 9013304741762151542 n.jpg? nc cat=110&ccb=1 3& nc sid=8bfeb9& nc ohc=9tJivDm38zIAX W2r9 & nc ht=scontent.fblr20 1

ಮಳೆಯಿಂದ ಜೀವ ಹಾನಿ, ಮನೆ ಹಾನಿ

ಪ್ರಸ್ತುತ ಸಾಲಿನಲ್ಲಿ ಮಳೆಯಿಂದ 3 ಮಾನವ ಜೀವ ಹಾನಿ ಸಂಭವಿಸಿದ್ದು, 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69 ಮನೆಗಳು ಸ್ವಲ್ಪಮಟ್ಟಿನ ಹಾನಿಗೀಡಾಗಿದ್ದು ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಡಿಸಿ ಖಾತೆಗೆ ಅನುದಾನ ಬಿಡುಗಡೆ

ಅತಿವೃಷ್ಟಿಯಿಂದ ಮಾನವ ಜೀವ ಹಾನಿ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ವ್ಯವಸ್ಥೆ ಮಾಡಬೇಕು. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಯಾವುದೇ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

200051479 1410448692649880 8212638646280116184 n.jpg? nc cat=108&ccb=1 3& nc sid=8bfeb9& nc ohc=uizX3KBub1UAX u2fG9& nc ht=scontent.fblr20 1

ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment