ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಸಾಹಿತ್ಯ ಹುಣ್ಣಿಮೆಯ 250ನೇ ತಿಂಗಳ ಕಾರ್ಯಕ್ರಮ ಜೂನ್ 10 ರಂದು ನಡೆಯಲಿದೆ (musical event).
ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ
ಈ ಹುಣ್ಣಿಮೆ ಸಂಭ್ರಮದಲ್ಲಿ ನಗರದ ಎಲ್ಲಾ ಗಾಯಕರನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. 50 ಜನರ 5 ತಂಡಗಳು ಎಂಬಂತೆ, 250 ಗಾಯಕರಿಂದ ಭಕ್ತಿಗೀತೆ, ಭಾವಗೀತೆ, ಜನಪದ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಆಸಕ್ತರು ಡಿ. ಮಂಜುನಾಥ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಆರ್ಟಿಒ ರಸ್ತೆ, ಶಿವಮೊಗ್ಗ, ಮೊ.ಸಂ: 9449552795 ಇವರನ್ನು ಸಂಪರ್ಕಿಸಲು ಕೋರಿದೆ.
ಇದನ್ನೂ ಓದಿ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?






