ಶಿವಮೊಗ್ಗ ನಗರದ 3 ಕ್ರೈಮ್ ನ್ಯೂಸ್ ಅಪ್ ಡೇಟ್ | SHIMOGA CRIME NEWS

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

Atiyas Motors

SHIVAMOGGA LIVE NEWS | 21 NOVEMBER 2022

ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ‘ದೇವ್ರು’ ಅರೆಸ್ಟ್ | CRIME NEWS

SHIMOGA : ಪೊಲೀಸ್ ಗಸ್ತು ವೇಳೆ ನ್ಯೂ ಮಂಡ್ಲಿ ಸರ್ಕಲ್ (NEW MANDLI) ಬಳಿ ಯುವಕನೊಬ್ಬ NEWS 1 jpgಅಮಲಿನಲ್ಲಿ ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದ. ಅತನ ವಿಚಾರಣೆ ವೇಳೆ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ (Mc Gann Hospital) ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ (Ganja) ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಆತನನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನ್ಯೂ ಮಂಡ್ಲಿ ನಿವಾಸಿ ಪುನಿತ್ ಕುಮಾರ್ ಅಲಿಯಾಸ್ ದೇವ್ರು ಎಂದು ಗುರುತಿಸಲಾಗಿದೆ. NDPS ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬೈಕ್ ಅಡ್ಡಗಟ್ಟಿ ಬೆನ್ನಿಗೆ ಚಾಕು ಹಾಕಿದ, ಕೆಳಗೆ ಬಿದ್ದಾಗ ಎದೆ ಚಾಕು ಹಾಕಲು ಯತ್ನ | CRIME NEWS

SHIMOGA | ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. NEWS 2 jpgಗಾಯಗೊಂಡಿದ್ದ ಟ್ಯಾಂಕ್ ಮೊಹಲ್ಲಾ ನಿವಾಸಿ ಬಷೀರ್ ಖಾನ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಅದೆ ಬಡಾವಣೆಯ ಮೊಹಮ್ಮದ್ ಜಾಫರ್ ಸಾದಿಕ್ ಅಲಿಯಾಸ್ ಬಾಷಿಗಂಡ ಎಂಬಾತ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಟ್ಯಾಂಕ್ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ.

ಬೈಕ್ ಅಡ್ಡಗಟ್ಟಿದ ಮೊಹಮ್ಮದ್ ಜಾಫರ್ ಸಾದಿಕ್, ಬಷಿರ್ ಖಾನ್ ಅವರ ಬೆನ್ನಿಗೆ ಚಾಕು ಹಾಕಿದ್ದಾನೆ. ಕೆಳಗೆ ಬಿದ್ದಾಗ ಎದೆಗೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸ್ಥಳೀಯರು ಜಗಳ ಬಿಡಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ರವೀಂದ್ರ ನಗರದಲ್ಲಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಮೇಲೆ ಪೊಲೀಸ್ ದಾಳಿ | CRIME NEWS

SHIMOGA | ರವೀಂದ್ರ ನಗರದ ಪಾರ್ಕ್ ಬಳಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಮೇಲೆ NEWS 3 jpgಪೊಲೀಸರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರನ್ನು ಬಂಧಿಸಲಾಗಿದ್ದು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ಜಯನಗರ ಠಾಣೆ ಇನ್ಸ್ ಪೆಕ್ಟರ್ ಮಾದಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು, 5 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ವಸಂತ ಕುಮಾರ್, ರಾಜು, ಗೋವಿಂದ, ಅಭಿಲಾಷ್, ಸಚಿನ್ ಎಂದು ಗುರುತಿಸಲಾಗಿದೆ. ಇವರಿಂದ ಖಾರದ ಪುಡಿ, ಎರಡು ಚಾಕು, ಒಂದು ರಾಡ್, ದೊಣ್ಣೆ, ಬೈಕ್ ವಶಕ್ಕೆ ಪಡೆಯಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ALSO READ | ರಾತ್ರೋರಾತ್ರಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ವೈದ್ಯರು, ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

Shimoga Nanjappa HOspital

 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment