ಶಿವಮೊಗ್ಗ ನಗರದಲ್ಲಿ ಒಂದೇ ದಿನ 4500 ದೋಸೆ ಹಂಚಿದ ಭಕ್ತರು, ಯಾಕೆ? 3 ವರ್ಷದಿಂದ ನಡೆಯುತ್ತಿದೆ ಕಾರ್ಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 3 JANUARY 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 4500 ಸಾವಿರಕ್ಕೂ ಹೆಚ್ಚು ಸೆಟ್ ದೋಸೆ ವಿತರಿಸಲಾಯಿತು.

ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ

ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 4500 ಸೆಟ್ ದೋಸೆ ವಿತರಣೆ ಮಾಡಿದರು. ನಗರದ ಮೆಗ್ಗಾನ್‌ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ ಬಸ್‌ ನಿಲ್ದಾಣ, ಎಂಆರ್‌ಎಸ್‌ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪ್‌, ಹೊಳೆ ಬಸ್‌ ನಿಲ್ದಾಣದಲ್ಲಿ ಕೂಲಿ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ ಮತ್ತು ವಿವಿಧ ಶಾಲೆಗಳಿಗೆ ದೋಸೆಗಳನ್ನು ವಿತರಿಸಲಾಯಿತು.

60 ರಿಂದ 70 ಭಕ್ತರಿಂದ ತಯ್ಯಾರಿ

ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಗುರುನಾಥರ ವರ್ಧಂತಿ ಅಂಗವಾಗಿ ಭಕ್ತರು ದೋಸೆ ಹಂಚಿದರು. ಇದಕ್ಕಾಗಿ ಗುರು ಭಿಕ್ಷೆ ಬೇಡಿ ಅಕ್ಕಿ ಮತ್ತು ಇತರೆ ದವಸ ಸಂಗ್ರಹಿಸಿದ್ದರು. ಸುಮಾರು 70 ಭಕ್ತರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ದೋಸೆ ಸಿದ್ಧಪಡಿಸಿ, ಅವುಗಳನ್ನು ಪ್ಯಾಕ್ ಮಾಡಿ ವಿತರಣೆ ವಿತರಣೆ ಮಾಡಿದರು.

ಶ್ರೀ ವೆಂಕಟಾಚಲ ಗುರುನಾಥರಿಗೆ ದೋಸೆ ಅಂದರೆ ಪ್ರೀತಿ. ಈ ಹಿನ್ನೆಲೆ 4500 ದೋಸೆಗಳನ್ನು ಸಿದ್ಧಪಡಿಸಿ ವಿವಿಧೆಡೆ ವಿತರಣೆ ಮಾಡಲಾಯಿತು. ಕಳೆದ ಮೂರು ವರ್ಷದಿಂದ ಶಿವಮೊಗ್ಗ ನಗರದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ವಿವಿಧೆಡೆ ಭಕ್ತರು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ.ನರೇಂದ್ರ ಕುಮಾರ್‌, ಭಕ್ತರು

ವರ್ಧಂತಿ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ ತುಳಜಾ ಭವಾನಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ಗುರುನಾಥರಿಗೆ ಆರತಿ, ದೀಪಪೂಜೆ, ಪುಷ್ಪಾರ್ಚನೆ ನೆರವೇರಿಸಲಾಯಿತು. ಇನ್ನು, ಕಳೆದ ರಾತ್ರಿ ನಗರದ ವಿವಿಧೆಡೆ ರಸ್ತೆ ಬದಿ ಮಲಗುವವರಿಗೆ ಬೆಡ್‌ ಶೀಟ್‌ ವಿತರಣೆ ಕಾರ್ಯ ನಡೆಯಿತು.

Sri Gurunatha vardanthi

Sri Gurunatha vardanthi

Sri Gurunatha vardanthi

Sri Gurunatha vardanthi

Sri Gurunatha vardanthi

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment