ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 JANUARY 2023
SHIMOGA : ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 4500 ಸಾವಿರಕ್ಕೂ ಹೆಚ್ಚು ಸೆಟ್ ದೋಸೆ ವಿತರಿಸಲಾಯಿತು.
ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ
ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 4500 ಸೆಟ್ ದೋಸೆ ವಿತರಣೆ ಮಾಡಿದರು. ನಗರದ ಮೆಗ್ಗಾನ್ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಎಂಆರ್ಎಸ್ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪ್, ಹೊಳೆ ಬಸ್ ನಿಲ್ದಾಣದಲ್ಲಿ ಕೂಲಿ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ ಮತ್ತು ವಿವಿಧ ಶಾಲೆಗಳಿಗೆ ದೋಸೆಗಳನ್ನು ವಿತರಿಸಲಾಯಿತು.
60 ರಿಂದ 70 ಭಕ್ತರಿಂದ ತಯ್ಯಾರಿ
ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಗುರುನಾಥರ ವರ್ಧಂತಿ ಅಂಗವಾಗಿ ಭಕ್ತರು ದೋಸೆ ಹಂಚಿದರು. ಇದಕ್ಕಾಗಿ ಗುರು ಭಿಕ್ಷೆ ಬೇಡಿ ಅಕ್ಕಿ ಮತ್ತು ಇತರೆ ದವಸ ಸಂಗ್ರಹಿಸಿದ್ದರು. ಸುಮಾರು 70 ಭಕ್ತರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ದೋಸೆ ಸಿದ್ಧಪಡಿಸಿ, ಅವುಗಳನ್ನು ಪ್ಯಾಕ್ ಮಾಡಿ ವಿತರಣೆ ವಿತರಣೆ ಮಾಡಿದರು.
ವರ್ಧಂತಿ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ ತುಳಜಾ ಭವಾನಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ಗುರುನಾಥರಿಗೆ ಆರತಿ, ದೀಪಪೂಜೆ, ಪುಷ್ಪಾರ್ಚನೆ ನೆರವೇರಿಸಲಾಯಿತು. ಇನ್ನು, ಕಳೆದ ರಾತ್ರಿ ನಗರದ ವಿವಿಧೆಡೆ ರಸ್ತೆ ಬದಿ ಮಲಗುವವರಿಗೆ ಬೆಡ್ ಶೀಟ್ ವಿತರಣೆ ಕಾರ್ಯ ನಡೆಯಿತು.






LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















