SHIVAMOGGA LIVE NEWS | 3 JANUARY 2023
SHIMOGA : ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 4500 ಸಾವಿರಕ್ಕೂ ಹೆಚ್ಚು ಸೆಟ್ ದೋಸೆ ವಿತರಿಸಲಾಯಿತು.
ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ
ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 4500 ಸೆಟ್ ದೋಸೆ ವಿತರಣೆ ಮಾಡಿದರು. ನಗರದ ಮೆಗ್ಗಾನ್ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಎಂಆರ್ಎಸ್ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪ್, ಹೊಳೆ ಬಸ್ ನಿಲ್ದಾಣದಲ್ಲಿ ಕೂಲಿ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ ಮತ್ತು ವಿವಿಧ ಶಾಲೆಗಳಿಗೆ ದೋಸೆಗಳನ್ನು ವಿತರಿಸಲಾಯಿತು.
60 ರಿಂದ 70 ಭಕ್ತರಿಂದ ತಯ್ಯಾರಿ
ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಗುರುನಾಥರ ವರ್ಧಂತಿ ಅಂಗವಾಗಿ ಭಕ್ತರು ದೋಸೆ ಹಂಚಿದರು. ಇದಕ್ಕಾಗಿ ಗುರು ಭಿಕ್ಷೆ ಬೇಡಿ ಅಕ್ಕಿ ಮತ್ತು ಇತರೆ ದವಸ ಸಂಗ್ರಹಿಸಿದ್ದರು. ಸುಮಾರು 70 ಭಕ್ತರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ದೋಸೆ ಸಿದ್ಧಪಡಿಸಿ, ಅವುಗಳನ್ನು ಪ್ಯಾಕ್ ಮಾಡಿ ವಿತರಣೆ ವಿತರಣೆ ಮಾಡಿದರು.
ವರ್ಧಂತಿ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ ತುಳಜಾ ಭವಾನಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ಗುರುನಾಥರಿಗೆ ಆರತಿ, ದೀಪಪೂಜೆ, ಪುಷ್ಪಾರ್ಚನೆ ನೆರವೇರಿಸಲಾಯಿತು. ಇನ್ನು, ಕಳೆದ ರಾತ್ರಿ ನಗರದ ವಿವಿಧೆಡೆ ರಸ್ತೆ ಬದಿ ಮಲಗುವವರಿಗೆ ಬೆಡ್ ಶೀಟ್ ವಿತರಣೆ ಕಾರ್ಯ ನಡೆಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200