ಶಿವಮೊಗ್ಗ: 7 ದಿನದ ಗಡುವು, ತಪ್ಪಿದಲ್ಲಿ ನೀರು ಸಂಪರ್ಕ ಕಡಿತದ ಎಚ್ಚರಿಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕಂದಾಯ ಬಾಕಿ ಉಳಿಸಿಕೊಂಡಿರುವ ಬಳಕೆದಾರರು ಹಾಗೂ ಮಾಲೀಕರು 7 ದಿನಗಳ ಒಳಗಾಗಿ ಕಡ್ಡಾಯವಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೆ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬಾಕಿ ಮೊತ್ತವನ್ನು ನಿಗದಿತ ಅವಧಿಯಲ್ಲಿ ಪಾವತಿಸದ ಗ್ರಾಹಕರ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Drinking-Water-Tap