ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಖಾಕಿ ಭದ್ರಕೋಟೆಯಾಗಿದೆ. ನಾಲ್ಕು ದಿಕ್ಕಿಗೂ ಬ್ಯಾರಿಕೇಡ್ ಹಾಕಲಾಗಿದೆ. ಯಾವುದೆ ವಾಹನಗಳು ಈ ಸರ್ಕಲ್ನಲ್ಲಿ ಹಾದು ಹೋಗಲು ಅವಕಾಶವಿಲ್ಲ.
ಕರ್ಫ್ಯೂ ಇದ್ದರೂ ಅನಗತ್ಯ ಓಡಾಡುವವರಿಗೆ ಕಡಿವಾಣ ಹಾಕಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಿ.ಹೆಚ್.ರಸ್ತೆ, ನೆಹರೂ ರೋಡ್, ಓ.ಟಿ.ರಸ್ತೆ ಕಡೆಯಿಂದ ಓಡುವವರು ಈ ಸರ್ಕಲ್ ಮೂಲಕವೆ ಸಂಚರಿಸಬೇಕಾಗುತ್ತದೆ.
ಬ್ಯಾರಿಕೇಡ್ ಹಾಕಿರುವುದರಿಂದ ಅಮೀರ್ ಅಹಮದ್ ಸರ್ಕಲ್ ಕಡೆಯಿಂದ ಸಂಚರಿಸಲು ಯಾರಿಗೂ ಅವಕಾಶವಿಲ್ಲ. ಸೈನ್ಸ್ ಮೈದಾನದ ಕಡೆಯಿಂದ ಬರುವವರು ಬಸ್ ನಿಲ್ದಾಣದ ಕಡೆಯಿಂದ ನೇರವಾಗಿ ಸಂಚರಿಸಲು ಅವಕಾಶವಿಲ್ಲ. ವೀರಭದ್ರ ಟಾಕೀಸ್ , ಡಿವಿಎಸ್ ಸರ್ಕಲ್, ಗೋಪಿ ಸರ್ಕಲ್ ಮೂಲಕ ಸುತ್ತಿ ಬಳಸಿ ಸಂಚರಿಸಬೇಕು.
ತುರ್ತು ಸೇವೆಗಳಾದ ಆಂಬುಲೆನ್ಸ್, ಪೊಲೀಸ್, ಅಗ್ನಿಶಾಮಕ ವಾಹನಗಳಿಗೆ ಮಾತ್ರ ಸರ್ಕಲ್ ಮೂಲಕ ಹಾದು ಹೋಗಲು ಅವಕಾಶವಿದೆ. ಸುತ್ತಿ ಬಳಸಿ ಓಡಾಡುವುದರಿಂದ ತುರ್ತು ಅಗತ್ಯವಿದ್ದವರಷ್ಟೆ ರಸ್ತೆಗಿಳಿಯುತ್ತಾರೆ. ಅಲ್ಲದೆ ಪ್ರತಿ ಸರ್ಕಲ್, ರಸ್ತೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿರುವುದರಿಂದ ಅನಗತ್ಯ ಸುತ್ತಾಡುವವರಿಗೆ ಬ್ರೇಕ್ ಬೀಳಲಿದೆ ಅನ್ನುವುದು ಪೊಲೀಸರ ಲೆಕ್ಕಾಚಾರ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






