SHIVAMOGGA LIVE NEWS | 1 DECEMBER 2023
SHIMOGA : ತುಂಗಾ ನದಿ (Tunga River) ಮಲಿನ ವಾಗುತ್ತಿದ್ದರೂ ಅದನ್ನು ತಡೆಯಲು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕಳೆದ 5 ವರ್ಷ ಪಾಲಿಕೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಒಂದು ದಿನವೂ ನದಿಯ ಸ್ವಚ್ಛತೆ ಬಗ್ಗೆ ಧ್ವನಿ ಎತ್ತಲಿಲ್ಲ. ಆದರೆ ತನ್ನ ಅವಧಿ ಮುಗಿಯುವ ಕೊನೆ ದಿನ ಕಾಟಾಚಾರಕ್ಕಾಗಿ ತುಂಗಾ ನದಿ (Tunga River) ಸ್ವಚ್ಛತೆ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ ಎಂದು ಎಎಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮ್ಮದ್, ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಇದನ್ನೂ ಓದಿ- ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?
ನದಿ ನೀರು ಕುಡಿಯಲು ಮತ್ತು ಬಳಸಲೂ ಯೋಗ್ಯವಾಗಿಲ್ಲ. ಇಡೀ ನಗರದ ಕೊಳಚೆ ನೀರು ನದಿಗೆ ಸೇರುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಯಾವ ಕೆಲಸವೂ ಆಗಲಿಲ್ಲ. ಕೋಟ್ಯಂತರ ರೂಪಾಯಿ ಹಣ ದುರುಪಯೋಗವಾಗಿದೆ. ಇಡೀ ನದಿ ಕೊಳಚೆಯಿಂದ ಕೂಡಿದೆ ಎಂದು ದೂರಿದರು.
ಪಕ್ಷದ ಪ್ರಮುಖರಾದ ಮಂಜುನಾಥ ಪೂಜಾರಿ, ಸುರೇಶ್ ಕೋಟೆಕರ್, ರಘು, ಶೇಖರಪ್ಪ, ಸಾತ್ವಿಕ್ ಮೊದಲಾದವರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200