ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗೆಹರಿಸಬೇಕು, ಬಸ್ ಸೌಕರ್ಯ ಪುನಾರಂಭ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆನ್ಲೈನ್ ತರಗತಿಗಳು ನಡೆಯುತ್ತಿದ್ದು, ಜಿಲ್ಲೆಯ ವಿವಿಧೆಡೆ ಮೊಬೈಲ್ ನೆಟ್ವರ್ಕ್ ಸಮಸ್ಯೆ ಉಂಟಾಗಿದೆ. ಇದರಿಂದ ವಿದ್ಯಾರ್ಥಿಗಳು ಸಮರ್ಪಕವಾಗಿ ತರಗತಿಯಲ್ಲಿ ಭಾಗವಹಿಸಲು ಆಗುತ್ತಿಲ್ಲ. ಆದ್ದರಿಂದ ಕೂಡಲೆ ನೆಟ್ವರ್ಕ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.
ಇನ್ನು, ಲಾಕ್ ಡೌನ್ ಹಿನ್ನೆಲೆ ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಈಗ ಬಸ್ ಸೇವೆ ಪುನಾರಂಭವಾಗಿದೆ. ಆದರೆ ಬಹುತೇಕ ಕಡೆಗೆ ಬಸ್ಸುಗಳು ಸಂಚರಿಸುತ್ತಿಲ್ಲ. ಈ ಮಾರ್ಗದಲ್ಲೂ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಎಬಿವಿಪಿ ಮಹಾನಗರ ಕಾರ್ಯದರ್ಶಿ ಧನುಷ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






