VISLಗೆ ಬೇಕು ಬಂಡವಾಳ, ಬೋಧಕ ಸಿಬ್ಬಂದಿ ನೇಮಕಕ್ಕೆ ಒತ್ತಾಯ, ABVP ಕಾರ್ಯಕಾರಿಣಿಯಲ್ಲಿ ಏನೆಲ್ಲ ನಿರ್ಣಯವಾಗಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019

71053142 930302700664484 3871352906363961344 n.jpg? nc cat=109& nc oc=AQm43a lj8UotMIYvWYSDacXZlLoHNpQE1yctTqm6HxxFQyffmYpSuh Du5D1ZsHTXs& nc ht=scontent.fblr1 3

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಸರ್ಕಾರ ತಕ್ಷಣ ಬಂಡವಾಳ ಹೂಡಿಕೆ ಮಾಡಿ, ಉತ್ಪಾದನೆ ಆರಂಭಿಸಬೇಕು ಅಂತಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Prashanth GPS copy

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿಯಲ್ಲಿ ಇರುವುದು ಶೋಚನೀಯ. ಹಾಗಾಗಿ ಜನಪ್ರತಿನಿಧಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಕಾರ್ಖಾನೆ ಪುನಶ್ಚೇತನದ ಕುರಿತು ಧ್ವನಿ ಎತ್ತಬೇಕು ಎಂದರು.

ತೀವ್ರ ನಿಗಾ ಘಟಕದಲ್ಲಿ ಹಾಸ್ಟೆಲ್

ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶೇ.50ರಷ್ಟು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಉಳಿದಿವೆ. ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯವಿಲ್ಲದೆ ಐಸಿಯುನಲ್ಲಿವೆ. ಕೂಡಲೆ ಮೂಲ ಸೌಕರ್ಯಕ್ಕೆ ವ್ಯವಸ್ಥೆ ಮಾಡಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ನಿರ್ಣಯಿಸಲಾಯಿತು.

71510010 930534033974684 4293479304580300800 n.jpg? nc cat=106& nc oc=AQmZDB6pISXDoRj5fGxABMVHbVGvVZ5Lc1cl7YIO6fbm5aJ2ybcNM5q2rDFMdM3Hnag& nc ht=scontent.fblr1 3

ಮಹಾತ್ಮ ಗಾಂಧೀಜಿ ಅವರ 150ನೆ ವರ್ಷದ ಹುಟ್ಟುಹಬ್ಬದ ಅಂಗವಾಗಿ ರಾಜ್ಯದ 150 ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು. ಹೊಸ ಶಿಕ್ಷಣ ನೀತಿ ಕರುಡು ತಯಾರಿಸಿದ ಡಾ.ಕಸ್ತೂರಿ ರಂಗನ್ ಮತ್ತು ಪ್ರೊ.ಎಂ.ಕೆ.ಶ್ರೀಧರ್ ಅವರಿಗೆ ಕಾರ್ಯಕಾರಿಣಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಎಬಿವಿಪಿ ಕಾರ್ಯದರ್ಶಿ ಹರ್ಷ ನಾರಾಯಣ ತಿಳಿಸಿದರು.

ಜಿಲ್ಲಾ ಸಂಚಾಲಕ ಎಲ್.ಎನ್.ಮಂಜುನಾಥ್, ಹಿರಿಯ ಕಾರ್ಯಕರ್ತ ಶಿವಕುಮಾರ್ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment