SHIVAMOGGA LIVE NEWS, 30 JANUARY 2025
ಶಿವಮೊಗ್ಗ : ನಗರದ ಅಲ್ಲಮಪ್ರಭು ಮೈದಾನದಲ್ಲಿ ಜ.31ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ (ABVP) ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ಶೈಕ್ಷಣಿಕ ಸ್ಥಿತಿಗತಿ, ವಿಶ್ವವಿದ್ಯಾಲಯಗಳ ಸ್ಥಿತಿ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಪರಿಷತ್ ರಾಜ್ಯ ಕಾರ್ಯದರ್ಶಿ ಹೆಚ್.ಕೆ.ಪ್ರವೀಣ್ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 44ನೇ ರಾಜ್ಯ ಸಮ್ಮೇಳನದ ಕುರಿತು ಮಾಹಿತಿ ನೀಡಿದರು.
ಸಮ್ಮೇಳನದಲ್ಲಿ ಏನೆಲ್ಲ ನಡೆಯಲಿದೆ?
ಸಮ್ಮೇಳನದ ಯುವ ಮಂಚ್ ವೇದಿಕೆಯಲ್ಲಿ ಯುವ ಸ್ಪಂದನ – ತಂತ್ರಜ್ಞಾನದೊಂದಿಗೆ ಸಮಾಜ ಜೀವನ ಕುರಿತು ವಿಶೇಷ ಗೋಷ್ಠಿ ನಡೆಯಲಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಬಲವರ್ಧನೆ ಹಾಗೂ ಪ್ರಕೃತಿ ಮತ್ತು ಯುವ ಜೀವನ ಶೈಲಿ ಕುರಿತು ನಿರ್ಣಯ ಕೈಗೊಳ್ಳಲಾಗುವುದು.
ಕಾರ್ಯಕ್ರಮಕ್ಕೆ ಜ.31ರಂದು ಬೆಳಗ್ಗೆ 10ಕ್ಕೆ ಧ್ವಜಾರೋಹಣ ಹಾಗೂ ಪ್ರದರ್ಶಿನಿ ಮೂಲಕ ಸಮ್ಮೇಳನಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಕೂಡಲಿ ಶ್ರೀ ಕ್ಷೇತ್ರದ ಶ್ರೀ ಅಭಿನವ ಶಂಕರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಸಮ್ಮೇಳನ ಉದ್ಘಾಟನೆಯಾಗಲಿದೆ. ಅತಿಥಿಗಳಾಗಿ ವಿಜ್ಞಾನಿ ಡಾ.ಬಿ.ಎನ್. ಸುರೇಶ್, ಪರಿಷತ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಪಿ.ವಿ.ಕೃಷ್ಣಭಟ್, ಪರಿಷತ್ನ ರಾಷ್ಟ್ರೀಯ ಅಧ್ಯಕ್ಷ ಪ್ರೊ.ರಾಜ್ ಶರಣ್ ಶಾಹಿ ಭಾಗವಹಿಸಲಿದ್ದಾರೆ.
ಫೆಬ್ರವರಿ 2ರಂದು ಪ್ರಸಕ್ತ ಸಾಲಿನ ಯುವ ಪುರಸ್ಕಾರ ಪ್ರಶಸ್ತಿಯನ್ನು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಸತೀಶ್ ಮೇತ್ರಿ ಅವರಿಗೆ ನೀಡಲಾಗುವುದು. ಸಮ್ಮೇಳನದಲ್ಲಿ ಪಂಚ ಪರಿವರ್ತನೆ ಕುರಿತು ಸಹ ಪ್ರಾಂತ ಪ್ರಚಾರಕ ನಂದೀಶ್, ಕ್ಯಾಂಪಸ್ ಕಾರ್ಯ ವಿಷಯದ ಕುರಿತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್. ಬಾಲಕೃಷ್ಣ ಹಾಗೂ ಶೈಕ್ಷಣಿಕ ವ್ಯವಸ್ಥೆ ವಿಷಯದ ಕುರಿತು ಡಾ.ಹೆಚ್.ಕೆ.ಸತೀಶ್ ಮಾತನಾಡಲಿದ್ದಾರೆ.
ಫೆಬ್ರವರಿ 2ರಂದು ಸಂಜೆ 4ಕ್ಕೆ ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಯಲಿದೆ. ಇದರಲ್ಲಿ ಪರಿಷತ್ನ ರಾಷ್ಟ್ರೀಯ ಕಾರ್ಯದರ್ಶಿ ಶಾಲಿನಿ ವರ್ಮ ಭಾಗವಹಿಸಲಿದ್ದಾರೆ. ವಾಸವಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಅಭಿಷೇಕ್, ಸುಧಾ ಶೆಣೈ, ರಂಜಿನಿ ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಎರಡು ಇಂದಿರಾ ಕ್ಯಾಂಟೀನ್, ಎಲ್ಲೆಲ್ಲಿ? ಯಾವಾಗ ಶುರುವಾಗುತ್ತೆ?