| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ತಂಬಾಕು ಉತ್ಪನ್ನ ಖರೀದಿಸುವಂತೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪೇರೇಪಿಸುವುದನ್ನು ನಿಯಂತ್ರಿಸಿ, ಅಂಥವರ ವಿರುದ್ಧ ತಂಬಾಕು ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಖುದ್ದು ಅಂಗಡಿ ಮುಂಗಟ್ಟು, ಹೋಟೆಲ್ ಸೇರಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಪ್ರಾಪ್ತರಿಗೆ ಹಾಗೂ ಅಪ್ರಾಪ್ತರಿಂದ ತಂಬಾಕು ಉತ್ಪನ್ನಗಳ ಮಾರಾಟ, ಶಾಲಾ ಕಾಲೇಜುಗಳ 300 ಅಡಿ ಪ್ರದೇಶದ ಮಿತಿಯೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಕ್ಯಾನ್ಸರ್ ಕರಾಳತೆಯನ್ನು ಪ್ರತಿಬಿಂಬಿಸುವ ಚಿತ್ರವಿಲ್ಲದ ತಂಬಾಕು ಉತ್ಪನ್ನಗಳ ಪ್ಯಾಕೆಟ್ ಮಾರಾಟ ಮಾಡುವುದು ಅಪರಾಧ ಎಂದರು.
ನಿರಂತರವಾಗಿ ಮಾಹಿತಿ ಮತ್ತು ಸೂಚನೆ ನೀಡುತ್ತಿದ್ದರೂ ತಂಬಾಕು ಉತ್ಪನ್ನಗಳ ಮಾರಾಟ ಸ್ಥಗಿತಗೊಂಡಿಲ್ಲ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು ಅಧಿಕಾರಿಗಳ ತಂಡ ಕಾಲಕಾಲಕ್ಕೆ ದಿಢೀರ್ ದಾಳಿ ನಡೆಸಿ ದಂಡನೆಗೆ ಗುರಿಪಡಿಸಲಿದೆ ಎಂದು ಹೇಳಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಜಿಲ್ಲಾದ್ಯಂತ ಈಗಾಗಲೆ ಕಾರ್ಯಾಚರಣೆ ನಡೆಸಿ ದಂಡ ವಿಧಿಸುವ ಮೂಲಕ ಸಾರ್ವಜನಿಕರಲ್ಲಿ ಹಾಗೂ ವರ್ತಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಜಿಲ್ಲಾ ಕೇಂದ್ರಸ್ಥಾನ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಈಗಾಗಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಮರ್ಪಕವಾಗಿ ಈ ಕಾಯ್ದೆ ಅನುಷ್ಠಾನಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಿಸುವುದು ನಮ್ಮ ಗುರಿ ಎಂದರು.

ಮುಂದಿನ ದಿನಗಳಲ್ಲಿ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ತಂಬಾಕು ಮಾರಾಟಗಾರರು,ಟೀ ಮಾರಾಟಗಾರರು ಕೋಟ್ಟಾ ಕಾಯ್ದೆ ಉಲ್ಲಂಘಿಸದಂತೆ ಎಚ್ಚರಿಕೆಯಿಂದಿರಲು ಸೂಚಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()