ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 16 JANUARY 2025
ಶಿವಮೊಗ್ಗ : ಸಾಗರ ಪ್ರಾಂತ್ಯ ಅಡಿಕೆ (Adike) ಬೆಳೆಗಾರರ ಸಂಘದ ವತಿಯಿಂದ ಜ.18ರಂದು ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿದೇಶಿ ಅಡಿಕೆ ಆಮದು, ಅಡಿಕೆಗೆ ಬಾಧಿಸುತ್ತಿರುವ ರೋಗಗಳು, ವನ್ಯಜೀವಿ ಹಾವಳಿ, ಅಡಿಕೆ ಬೆಳೆಗಾರರಿಗೆ ಇರುವ ಸೊಪ್ಪಿನ ಬೆಟ್ಟದ ಸಮಸ್ಯೆಗಳಿಗೆ ಪರಿಹಾರವನ್ನು ಪ್ರಮುಖವಾಗಿರಿಸಿಕೊಂಡು ಸಮಾವೇಶ ನಡೆಸಲಾಗುತ್ತಿದೆ ಎಂದರು.

ಅಡಿಕೆ ಕುರಿತು ಸಂಶೋಧನೆ ನಡೆಸಿ ಕ್ಯಾನ್ಸರ್ಕಾರಕ ಅಂಶಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಬೇಕು. ಈ ಸಂಶೋಧನೆಗೆ ಪ್ರತ್ಯೇಕವಾಗಿ ಹಣ ಮೀಸಲಿಡಬೇಕು. ಎಲೆ ಚುಕ್ಕೆ ರೋಗದಿಂದ ಈಗಾಗಲೆ ಸುಮಾರು 226 ಕೋಟಿ ರೂ. ನಷ್ಟವಾಗಿದೆ. ಆದ್ದರಿಂದ ರೋಗ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ರಾಜ್ಯದಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಬೇಕು. ರಾಜ್ಯದ ಅಡಿಕೆಯನ್ನು ವಿದೇಶಕ್ಕೆ ರಫ್ತು ಮಾಡಬೇಕು. ವಿದೇಶಿ ಆಡಿಕೆ ಆಮದು ತಗ್ಗಿಸಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಲಾಗುತ್ತದೆ ಎಂದು ರಾಘವೇಂದ್ರ ತಿಳಿಸಿದರು.ರಾಜ್ಯದ ಅಡಿಕೆ ವಿದೇಶಕ್ಕೆ ರಫ್ತಿಗೆ ಮನವಿ

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





