SHIVAMOGGA LIVE NEWS, 16 JANUARY 2025
ಶಿವಮೊಗ್ಗ : ಸಾಗರ ಪ್ರಾಂತ್ಯ ಅಡಿಕೆ (Adike) ಬೆಳೆಗಾರರ ಸಂಘದ ವತಿಯಿಂದ ಜ.18ರಂದು ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿದೇಶಿ ಅಡಿಕೆ ಆಮದು, ಅಡಿಕೆಗೆ ಬಾಧಿಸುತ್ತಿರುವ ರೋಗಗಳು, ವನ್ಯಜೀವಿ ಹಾವಳಿ, ಅಡಿಕೆ ಬೆಳೆಗಾರರಿಗೆ ಇರುವ ಸೊಪ್ಪಿನ ಬೆಟ್ಟದ ಸಮಸ್ಯೆಗಳಿಗೆ ಪರಿಹಾರವನ್ನು ಪ್ರಮುಖವಾಗಿರಿಸಿಕೊಂಡು ಸಮಾವೇಶ ನಡೆಸಲಾಗುತ್ತಿದೆ ಎಂದರು.
ಅಡಿಕೆ ಕುರಿತು ಸಂಶೋಧನೆ ನಡೆಸಿ ಕ್ಯಾನ್ಸರ್ಕಾರಕ ಅಂಶಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಬೇಕು. ಈ ಸಂಶೋಧನೆಗೆ ಪ್ರತ್ಯೇಕವಾಗಿ ಹಣ ಮೀಸಲಿಡಬೇಕು. ಎಲೆ ಚುಕ್ಕೆ ರೋಗದಿಂದ ಈಗಾಗಲೆ ಸುಮಾರು 226 ಕೋಟಿ ರೂ. ನಷ್ಟವಾಗಿದೆ. ಆದ್ದರಿಂದ ರೋಗ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ರಾಜ್ಯದಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಬೇಕು. ರಾಜ್ಯದ ಅಡಿಕೆಯನ್ನು ವಿದೇಶಕ್ಕೆ ರಫ್ತು ಮಾಡಬೇಕು. ವಿದೇಶಿ ಆಡಿಕೆ ಆಮದು ತಗ್ಗಿಸಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಲಾಗುತ್ತದೆ ಎಂದು ರಾಘವೇಂದ್ರ ತಿಳಿಸಿದರು.ರಾಜ್ಯದ ಅಡಿಕೆ ವಿದೇಶಕ್ಕೆ ರಫ್ತಿಗೆ ಮನವಿ
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ