| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
![]()
ಶಿವಮೊಗ್ಗ: ಮಾಚೇನಹಳ್ಳಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಪಾಸಾದವರು ಈ ಕೋರ್ಸುಗಳಿಗೆ (Course) ಸೇರಬಹುದಾಗಿದೆ. ಈ ಕೋರ್ಸುಗಳನ್ನು ಪೂರ್ಣಗಳಿಸಿದರೆ ಶೇ.100ರಷ್ಟು ಉದ್ಯೋಗವಕಾಶವಿದೆ.
ಇದನ್ನೂ ಓದಿ » ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರಬೇತಿ ಕೇಂದ್ರದ ಪ್ರಾಂಶುಪಾಲ ದೀಪಕ್ ಕುಮಾರ್, ಎಐಸಿಟಿಇ 2010ರಲ್ಲಿ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಕೌಶಲಾಭವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆ ಅಡಿ ಮಾನ್ಯತೆ ಪಡೆದಿದೆ ಎಂದು ತಿಳಿಸಿದರು.
ಕಾಲೇಜಿನ ಹೈಲೈಟ್ಸ್
- ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್, ಡಿಪ್ಲೋಮಾ ಇನ್ ಮೆಕಟ್ರಾನಿಕ್ಸ್ ಕೋರ್ಸುಗಳಿಗೆ ಪ್ರಸಕ್ತ ಸಾಲಿನ ಪ್ರವೇಶ ಆರಂಭವಾಗಿದೆ.
- ಪ್ರತಿ ಕೋರ್ಸ್ಗೆ 60 ಸೀಟ್ ಇರಲಿದೆ. ಒಟ್ಟು 180 ವಿದ್ಯಾರ್ಥಿಗಳಿಗೆ ಅವಕಾಶ ಇರಲಿದೆ. ಮೆರಿಟ್ ಮತ್ತು ರೋಸ್ಟರ್ ಪದ್ಧತಿಯಂತೆ ಆಯ್ಕೆ ನಡೆಯಲಿದೆ. ಶೇ.30ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಕಾಯ್ದಿರಿಸಲಾಗಿದೆ.
- ಬಾಲಕರಿಗೆ ಸುಸಜ್ಜಿತವಾದ ವಸತಿ ನಿಲಯ ಇದೆ. ವಿದ್ಯಾರ್ಥಿಗಳಿಗೆ ಸ್ಟೈಫಂಡ್ ದೊರೆಯಲಿದೆ. ಎರಡನೆ ವರ್ಷದಿಂದ ಎಲ್ಲಾ ವಿದ್ಯಾರ್ಥಿಗಳಿಗೆ 28 ಸಾವಿರ ರೂ. ವಿದ್ಯಾರ್ಥಿ ವೇತನ ದೊರೆಯಲಿದೆ.
- ಮಾಚೇನಹಳ್ಳಿಯಲ್ಲಿ 5.15 ಎಕರೆ ವಿಸ್ತೀರ್ಣದಲ್ಲಿ ಸ್ವಂತ ಕಟ್ಟಡವಿದೆ. ವಿಶಾಲವಾದ ತರಗತಿಗಳು, ಯಂತ್ರಾಗಾರ, ಗ್ರಂಥಾಲಯ, ಸುಸಜ್ಜಿತ ಪ್ರಯೋಗಾಲಯ, ನುರಿತ ಉಪನ್ಯಾಸಕರಿದ್ದಾರೆ.
- ಶೇ.70ರಷ್ಟು ಪ್ರಾಯೋಗಿಕ ಶಿಕ್ಷಣವಿರಲಿದೆ. ಕಡ್ಡಾಯವಾಗಿ ಕೈಗಾರಿಕೆ ತರಬೇತಿ ದೊರೆಯಲಿದೆ.
- ಐ.ಟಿ.ಐ ಮತ್ತು ಪಿಯುಸಿ (ವಿಜ್ಞಾನ) ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶ ಕಲ್ಪಿಸಲಾಗುತ್ತದೆ.
![]()
2025-26ರ ಸಾಲಿನ ಪ್ರವೇಶ ಪ್ರಾರಂಭವಾಗಿದೆ. ಮೂರು ಕೋರ್ಸುಗಳಿವೆ. ಶೇ.70ರಷ್ಟು ಪ್ರಾಯೋಗಿಕ ತರಬೇತಿ ಇರಲಿದೆ. ಆಸಕ್ತರು ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
– ದೀಪಕ್ ಕುಮಾರ್.ವಿ.ಆರ್, ಪ್ರಾಂಶುಪಾಲರು
ಈ ಕೋರ್ಸುಗಳು ಮಧ್ಯಮ ವರ್ಗದ ಮಕ್ಕಳಿಗೆ ತುಂಬಾ ಅನುಕೂಲ. ಪ್ರಾಯೋಗಿಕವಾಗಿಯೆ ಮಕ್ಕಳು ಕಲಿಯುತ್ತಾರೆ. ಕೈಗಾರಿಕಾ ತರಬೇತಿ ಮುಗಿಸಿದರೆ ಮಾತ್ರ ಕೋರ್ಸ್ ಪೂರ್ಣವಾಗುತ್ತದೆ. ಮೂರನೇ ವರ್ಷದಲ್ಲಿ ಕ್ಯಾಂಪಸ್ ಸೆಲೆಕ್ಷನ್ ನಡೆಯುತ್ತದೆ.
– ನಾಗರಾಜ್.ಹೆಚ್.ಪಿ, ಘಟಕ ಮುಖ್ಯಸ್ಥರು
ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕ ಮಂಜುನಾಥ್ ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()