ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟಂಬರ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿ ವಿರುದ್ಧ ಕರೆ ನೀಡಿದ್ದ ಬಂದ್ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಮೆರವಣಿಗೆ ಅವಧಿಯಲ್ಲಿ ಮಾತ್ರ, ಕೆಲವು ಕಡೆ ಬಂದ್ ಮಾಡಲಾಗಿತ್ತು.
ಮೆರವಣಿಗೆ ಸಾಗುವ ಹಾದಿಯಲ್ಲಷ್ಟೇ ಬಂದ್
ಅಶೋಕ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಆಯೋಜಿಸಲಾಗಿತ್ತು. ಬಿ.ಹೆಚ್.ರೋಡ್, ನೆಹರೂ ರಸ್ತೆ, ಗೋಪಿ ಸರ್ಕಲ್, ಬಾಲರಾಜ್ ಅರಸ್ ರಸ್ತೆ, ಮಹಾವೀರ ಸರ್ಕಲ್ವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆ ನಡೆದ ಹಾದಿಯಲ್ಲಷ್ಟೆ ಅಂಗಡಿಗಳನ್ನು ಬಂದ್ ಮಾಡಲಾಯಿತು.

ಗಾಂಧಿ ಬಜಾರ್ನಲ್ಲಿ ವ್ಯಾಪಾರ ಸುಗಮ
ಶಿವಮೊಗ್ಗ ನಗರದ ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ನಲ್ಲಿ ಅಂಗಡಿಗಳ ಬಾಗಿಲುಗಳನ್ನು ಎಂದಿನಂತೆ ತಗೆಯಲಾಗಿತ್ತು. ಬೆಳಗ್ಗೆ ಜೆಡಿಎಸ್ ಕಾರ್ಯಕರ್ತರು ಬೈಕ್ ಜಾಥಾ ಮಾಡುವ ಮೂಲಕ ಬಂದ್ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಆ ವೇಳೆ ಕೆಲವು ನಿಮಿಷ ಅಂಗಡಿಗಳನ್ನು ಬಂದ್ ಮಾಡಿ, ಆ ಬಳಿಕ ಪುನಃ ವ್ಯಾಪಾರ, ವಹಿವಾಟು ಆರಂಭಿಸಲಾಯಿತು.
ಬಸ್ಸು, ಆಟೋ, ಟ್ರ್ಯಾಕ್ಸ್, ವಾಹನ ಎಂದಿನಂತೆ
ಶಿವಮೊಗ್ಗ ನಗರದಲ್ಲಿ ಬಸ್ಸು, ಆಟೋ, ಟ್ರ್ಯಾಕ್ಸ್, ವಾಹನಗಳ ಸಂಚಾರ ಎಂದಿನಂತೆ ಇತ್ತು. ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ಸಂಚಾಕ್ಕೆ ಯಾವುದೇ ಅಡೆತಡೆ ಇರಲಿಲ್ಲ. ಮೆರವಣಿಗೆ ಅವಧಿಯಲ್ಲಿ ಮಾತ್ರ ಬಸ್ಗಳ ಸಂಚಾರಕ್ಕೆ ಸ್ವಲ್ಪ ಸಮಸ್ಯೆಯಾಯ್ತು. ಇನ್ನು ಆಟೋ, ಟ್ರ್ಯಾಕ್ಸ್ ಸಂಚಾರಕ್ಕೆ ಯಾವುದೇ ಸಮಸ್ಯೆ ಇರಲಿಲ್ಲ. ವಾಹನಗಳ ಸಂಚಾರವು ಸುಗಮವಾಗಿತ್ತು. ಈಗ ಶಿವಮೊಗ್ಗ ನಗರ ಎಂದಿನಂತೆ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






