ಶಿವಮೊಗ್ಗದಲ್ಲಿ ಅಲರ್ಟ್‌, ರೈಲುಗಳಲ್ಲಿ ಶೋಧ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

ಶಿವಮೊಗ್ಗ: ದೆಹಲಿ ಸ್ಪೋಟದ ಬೆನ್ನಿಗೆ ಶಿವಮೊಗ್ಗದಲ್ಲಿ ಕಟ್ಟೆಚ್ಚರ (Alert) ಮುಂದುವರೆದಿದೆ. ರೈಲು, ಬಸ್ಸು ನಿಲ್ದಾಣಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕರು ಹೆಚ್ಚು ಸೇರುವ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶ್ವಾನ ದಳ ಮತ್ತು ಬಾಂಬ್‌ ಪತ್ತೆ ದಳದ ಅಧಿಕಾರಿಗಳು ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಹೇಗಿತ್ತು ಸ್ಥಿತಿ?

ಶಿವಮೊಗ್ಗ ಪೊಲೀಸರು ಮತ್ತು ರೈಲ್ವೆ ಪೊಲೀಸರು ಜಂಟಿಯಾಗಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಕಾರ್ಯ ನಡೆಸಿದರು. ಡಿವೈಎಸ್‌ಪಿ ಸಂಜೀವ್‌ ಕುಮಾರ್‌, ರೈಲ್ವೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಪ್ರಕಾಶ್‌ ಅವರ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಲಗೇಜ್‌ ತಪಾಸಣೆ ನಡೆಸಲಾಯಿತು. ರೈಲುಗಳ ಒಳಗು ಶೋಧ ಕಾರ್ಯಾಚರಣೆ ನಡೆಯಿತು. ರೈಲ್ವೆ ಪೊಲೀಸರು ಮತ್ತು ಶಿವಮೊಗ್ಗ ಪೊಲೀಸರು ಸಭೆ ನಡೆಸಿದರು.

ವಿಮಾನ ನಿಲ್ದಾಣದಲ್ಲಿಯು ತಪಾಸಣೆ

ಇನ್ನು, ವಿಮಾನ ನಿಲ್ದಾಣದಲ್ಲಿಯು ತಪಾಸಣೆ ಬಿಗಿಗೊಳಿಸಲಾಗಿದೆ. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯನ್ನು ಗೇಟ್‌ನಲ್ಲಿ ನಿಯೋಜಿಸಲಾಗಿದೆ. ವಿಮಾನ ನಿಲ್ದಾಣದ ಗೇಟ್‌ ಬಳಿಯೆ ತಪಾಸಣೆ ಬಿಗಿಗೊಳಿಸಲಾಗಿದೆ. ವಾಹನಗಳು, ಲಗೇಜ್‌ಗಳನ್ನು ಕೂಲಂಕಷವಾಗಿ ತಪಾಸಣೆ ಮಾಡಲಾಗುತ್ತಿದೆ.

ಬಸ್‌ ನಿಲ್ದಾಣಗಳು, ಶಿವಮೊಗ್ಗ ನ್ಯಾಯಾಲಯ, ಸರ್ಕಾರಿ ಕಚೇರಿಗಳು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಇವತ್ತು ಪರಿಶೀಲನೆ ನಡೆಸಲಾಯಿತು. ಇನ್ನು, ವಿವಿಧೆಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಅನುಮಾನಾಸ್ಪದ ವಸ್ತುಗಳು, ವ್ಯಕ್ತಿಗಳು ಕಂಡು ಬಂದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

checking at Airport
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ
Police checking at Shimoga Railway Station
ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ಪರಿಶೀಲನೆ
Police checking at Shimoga Railway Station
ರೈಲ್ವೆ ನಿಲ್ದಾಣದಲ್ಲಿ ಲಗೇಜ್‌ ತಪಾಸಣೆ. ರೈಲುಗಳ ಒಳಗು ಪೊಲೀಸರಿಂದ ಪರಿಶೀಲನೆ.
Police checking at Shimoga Railway Station
ಶಿವಮೊಗ್ಗ ಪೊಲೀಸರು ಮತ್ತು ರೈಲ್ವೆ ಪೊಲೀಸರ ಮೀಟಿಂಗ್‌

ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಕುಸಿದು ಬಿದ್ದಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು, ಪತ್ತೆಯಾಗದ ವಾರಸುದಾರರು

Alert

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 11, 2025 at 5:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 11, 2025

Leave a Comment