Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?

7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?

19/11/2022 8:56 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 19 NOVEMBER 2022

SHIMOGA : ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ವೇತನ ಆಯೋಗ ರಚಿಸಿದೆ. ಇದರ ಆದೇಶ ಹೊರಬಿದ್ದಿದ್ದು, ಆರು ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಗುಡುವು ವಿಧಿಸಲಾಗಿದೆ. ಈ ಮಧ್ಯೆ ವೇತನ ಆಯೋಗ (pay commission) ರಚನೆ ಮಾಡಿದ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ ಸಲ್ಲಿಸಿದೆ. ಅಲ್ಲದೆ ಹಿಂದಿನ ಆಯೋಗಗಳಿಗಿಂತಲು ಈ ಭಾರಿಯದ್ದು ವಿಭಿನ್ನವಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.

Atiyas Motors Shimoga

(pay commission)

ವೇತನ ಆಯೋಗ ರಚನೆ, ಆದೇಶ ಪ್ರಕಟ

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ.ರಾಮಮೂರ್ತಿ, ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಬಿ.ವನಹಳ್ಳಿ, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಅವರು ಸಮಿತಿಯ ಸದಸ್ಯರಾಗಿದ್ದಾರೆ. ವೇತನ ಆಯೋಗ ರಚನೆ ಸಂಬಂಧ ಸರ್ಕಾರ ಇಂದು ಸಂಜೆ ಆದೇಶ ಹೊರಡಿಸಿದೆ.

(pay commission)

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನದ ಕುರಿತು ಪರಿಶೀಲನೆಗೆ ಸೂಚನೆ

ರಾಜ್ಯ ಸರ್ಕಾರಿ ನೌಕರರ ಪ್ರಸ್ತುತ ವೇತನ ರಚನೆಯನ್ನು ಪರಿಶೀಲಿಸಿ, ನೂತನ ವೇತನ ಶ್ರೇಣಿಯನ್ನು ರಚಿಸಬೇಕು. ಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳಲು ಸಾಧ್ಯವಿದೆಯೆ ಎಂದು ಪರಿಶೀಲಿಸಬೇಕು. ತುಟ್ಟಿಭತ್ಯೆ ಸೂತ್ರವನ್ನು ನಿರ್ಧರಿಸಬೇಕು. ಬಾಡಿಗೆ, ನಗರ ಭತ್ಯೆ, ವಿಶೇಷ ಭತ್ಯೆಗಳ ಪ್ರಮಾಣವನ್ನು ಪರಿಶೀಲಿಸಬೇಕು. ಇವುಗಳಲ್ಲಿ ಬದಲಾವಣೆ ಅಗತ್ಯವಿದ್ದಲ್ಲಿ ಸಲಹೆ ನೀಡಬಹುದು. ನಿವೃತ್ತಿ ವೇತನ ಮತ್ತು ಸೌಲಭ್ಯಗಳನ್ನು ಪರಿಶೀಲಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.

(pay commission)

ಈ ಹಿಂದೆ ವೇತನ ಆಯೋಗಕ್ಕಾಗಿ ಮುಷ್ಕರ, ಧರಣಿ ನಡೆಸಬೇಕಾಗುತ್ತಿತ್ತು

ವೇತನ ಆಯೋಗ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸುತ್ತಿದ್ದಂತೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದರು. ‘ಈ ಹಿಂದೆ ವೇತನ ಆಯೋಗ ರಚನೆ ಸಂಬಂಧ ಹಲವು ಭಾರಿ ದೆಹಲಿಗೆ ಭೇಟಿ ನೀಡಬೇಕಾಗುತ್ತಿತ್ತು. ಮುಷ್ಕರ, ಧರಣಿಗಳನ್ನು ನಡೆಸಬೇಕಾಗುತ್ತಿತ್ತು. ಆದರೆ ಈ ಭಾರಿ ಮುಖ್ಯಮಂತ್ರಿಗಳ ಜೊತೆಗೆ ಒಂದೆರಡು ಸಭೆ ನಡೆಸಲಾಯಿತು. ಆಯೋಗ ರಚನೆಗೆ ಮನವಿ ಸಲ್ಲಿಸಲಾಯಿತು. ಅದರಂತೆ ಸರ್ಕಾರ ವೇತನ ಆಯೋಗ ರಚನೆ ಮಾಡಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಧನ್ಯವಾದ’ ಎಂದು ತಿಳಿಸಿದರು.

C S Shadakshari

ಇದೇ ಮೊದಲ ಭಾರಿ 4 ವರ್ಷ 7 ತಿಂಗಳಿಗೆ ಆಯೋಗ ರಚನೆ

ಮೊದಲು ವೇತನ ಆಯೋಗವನ್ನು ಐದೂವರೆ ವರ್ಷಕ್ಕೆ ರಚನೆ ಮಾಡಲಾಗುತ್ತಿತ್ತು. ಆಯೋಗ ಅಧ್ಯಯನ ನಡೆಸಿ, ವರದಿ ನೀಡುವಷ್ಟರಲ್ಲಿ ಹೆಚ್ಚಿನ ಸಮಯ ಕಳೆದು ಹೋಗುತ್ತಿತ್ತು. ಆದರೆ ಈ ಭಾರಿ 4 ವರ್ಷ 7 ತಿಂಗಳಿಗೆ ಆಯೋಗ ರಚನೆ ಮಾಡಲಾಗಿದೆ. ಆಯೋಗ ತನ್ನ ವರದಿ ಸಲ್ಲಿಸಲು ಸರ್ಕಾರ 6 ತಿಂಗಳ ಗಡುವು ನಿಗದಿ ಮಾಡಿದೆ. ‘ಈಗಾಗಲೆ ಆಯೋಗಕ್ಕೆ ಬೆಂಗಳೂರಿನಲ್ಲಿ ಕಚೇರಿ ಸಿದ್ಧವಾಗುತ್ತಿದೆ. ಇನ್ನೊಂದು ವಾರದಲ್ಲಿ ಕಚೇರಿ ಸಿದ್ಧವಾಗಲಿದ್ದು, ಸದಸ್ಯರು ತಮ್ಮ ಕೆಲಸ ಪ್ರಾರಂಭಿಸಲಿದ್ದಾರೆ. ಸರ್ಕಾರಿ ನೌಕರರ ಸಂಘದ ವತಿಯಿಂದ ಕೆಲವು ಬೇಡಿಕೆಗಳಿವೆ. ಅವುಗಳನ್ನು ಆಯೋಗಕ್ಕೆ ತಿಳಿಸಲಾಗುತ್ತದೆ’ ಎಂದು ಸಿ.ಎಸ್.ಷಡಾಕ್ಷರಿ ತಿಳಿಸಿದರು.

ALSO READ | ಶಿವಮೊಗ್ಗ ಡಿಸಿ, ಎಸ್ಪಿಗೆ ಮೀಟರ್ ಹಾಕದೆ, ಯದ್ವ ತದ್ವ ದುಡ್ಡು ಕೇಳಿದ ಆಟೋ ಚಾಲಕ, ಮುಂದೇನಾಯ್ತು?

ಈ ಭಾರಿಯ ವೇತನ ಆಯೋಗಕ್ಕಿಲ್ಲ ತರಹೇವಾರಿ ಜವಾಬ್ದಾರಿಯ ಹೊರೆ

ರಾಜ್ಯದಲ್ಲಿ 1952ರಿಂದ ಈವರೆಗೆ 12 ವೇತನ ಆಯೋಗಗಳನ್ನು ರಚನೆ ಮಾಡಲಾಗಿದೆ. ಈ ಮೊದಲು ಆಯೋಗಗಳು ವೇತನ ಪರಿಷ್ಕರಣೆಯ ಜೊತೆಗೆ ಆಡಳಿತ ಸುಧಾರಣೆ, ಸರ್ಕಾರಿ ನೌಕರರ ಜವಾಬ್ದಾರಿ, ಕಾರ್ಯ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧ್ಯಯನ ನಡೆಸಿ, ವರದಿ ನೀಡಬೇಕಾಗಿತ್ತು. ಇದೆ ಕಾರಣಕ್ಕೆ ವರದಿ ಸಲ್ಲಿಕೆ ವಿಳಂಬವಾಗುತ್ತಿತ್ತು. ಆದರೆ ಈ ಭಾರಿ ಸರ್ಕಾರ ವೇತನ ಆಯೋಗಕ್ಕೆ ವೇತನ ಪರಿಷ್ಕರಣೆ, ವಿವಿಧ ಭತ್ಯೆಗಳು ಮತ್ತು ನಿವೃತ್ತಿ ವೇತನದ ಕುರಿತು ಅಧ್ಯಯನಕ್ಕೆ ಮಾತ್ರ ಆದೇಶಿಸಿದೆ.

Shimoga nanjappa hospital

‘ವರದಿ ನೀಡಲು ಸರ್ಕಾರ ಆರು ತಿಂಗಳ ಗಡುವು ನೀಡಿದೆ. ಅದರೆ ಅದಕ್ಕಿಂತಲು ಮುಂಚಿತವಾಗಿಯೇ ಆಯೋಗ ವರದಿ ನೀಡಬಹುದಾಗಿದೆ. ಮಾರ್ಚ್ ತಿಂಗಳಿಂದಲೆ ವರದಿ ಅನುಷ್ಠಾನಗೊಳ್ಳುವ ಸಾಧ್ಯತೆ ಇದೆ’ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಯೋಗದ ವರದಿಯತ್ತ ಲಕ್ಷ ಲಕ್ಷ ನೌಕರರ ನಿರೀಕ್ಷೆ

7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು, ಕಾಲೇಜುಗಳ ಬೋಧಕೇತರ ಸಿಬ್ಬಂದಿಯ (ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತುಪಡಿಸಿ) ವೇತನ ಕುರಿತು ಪರಿಶೀಲನೆ ನಡೆಸಲಿದೆ. 5.20 ಲಕ್ಷ ರಾಜ್ಯ ಸರ್ಕಾರಿ ನೌಕರರು, ವಿವಿಧ ನಿಗಮ, ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 3 ಲಕ್ಷ ಸರ್ಕಾರಿ ನೌಕರರು, 4 ಲಕ್ಷ ನಿವೃತ್ತ ನೌಕರರಿಗೆ ಅನುಕೂಲ ಆಗಲಿದೆ.

‘1200 ವಿವಿಧ ಕೇಡರ್ ನ ನೌಕರರಿಗೆ ಇದರಿಂದ ಅನುಕೂಲ ಆಗಲಿದೆ. ಸರ್ಕಾರಕ್ಕೆ 12 ಸಾವಿರ ಕೋಟಿ ರೂ. ಪ್ರತಿ ವರ್ಷ ಹೆಚ್ಚುವರಿ ಖರ್ಚು ಬರಲಿದೆ. ಐದು ವರ್ಷಕ್ಕೊಮ್ಮೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಾಗಲಿದೆ’ ಎಂದು ಷಡಾಕ್ಷರಿ ತಿಳಿಸಿದರು.

Shimoga Nanjappa Hospital

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 191122-fatafat-news-5-pm ಶಿವಮೊಗ್ಗದ ಈ ಹೊತ್ತಿನ 3 ಫಟಾಫಟ್ ನ್ಯೂಸ್ ಓದಲು ಇಲ್ಲಿ ಕ್ಲಿಕ್ ಮಾಡಿ
Next Article crime name image ಶಿವಮೊಗ್ಗದಿಂದ ಬೆಂಗಳೂರು ತಲುಪಬೇಕಿದ್ದ ಚಿನ್ನದ ಬಿಸ್ಕೇಟ್ ಗಳು ನಾಪತ್ತೆ

ಇದನ್ನೂ ಓದಿ

Signal-at-Usha-Nursing-home-circle.
SHIVAMOGGA CITY

ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ಸಿಗ್ನಲ್‌ ಲೈಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Police-Jeep-in-Shimoga-city
CRIME DIARYSHIVAMOGGA CITY

ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಕೈ ಕೈ ಮಿಲಾಯಿಸದ ಸ್ನೇಹಿತರು, ಬಿಯರ್‌ ಬಾಟಲಿಯಿಂದ ಒಬ್ಬನ ತಲೆಗೆ ಏಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Bugilu-book-released-in-Shimoga
SHIVAMOGGA CITY

ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Online-Fraud-Case-image
CRIME DIARYSHIVAMOGGA CITY

ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Mukya-Pustaka-barahagarru-press-meet
SHIVAMOGGA CITY

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MLA-channabasappa-visit-Vidyanagara-Health-Centre.
SHIVAMOGGA CITY

ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?