ಹಂದಿ ಅಣ್ಣಿ ಕೊಲೆ ಕೇಸ್, ಶರಣಾದ 8 ಆರೋಪಿಗಳ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 5 ಸಂಗತಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA | 19 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹಂದಿ ಅಣ್ಣಿ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳು ಚಿಕ್ಕಮಗಳೂರು ಪೊಲೀಸರ ಮುಂದೆ ಶರಣಾಗಿದ್ದಾರೆ (SURRENDER). ಈ ಕುರಿತು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Shimoga Nanjappa Hospital

ಎಸ್.ಪಿ ಹೇಳಿದ್ದೇನು?

ಶಿವಮೊಗ್ಗ ಪ್ರೆಸ್ ಟ್ರಸ್ಟ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಅವರು, ಹಂದಿ ಅಣ್ಣಿ ಕೊಲೆ (MURDER) ಪ್ರಕರಣದ ಎಂಟು ಆರೋಪಿಗಳು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ (SURRENDER). ನಮ್ಮ ಪೊಲೀಸರು (POLICE) ಅಲ್ಲಿಗೆ ಹೋಗಿ ಕೋರ್ಟ್ ಮುಂದೆ ಹಾಜರುಪಡಿಸಿ, ಅವರನ್ನ ವಶಕ್ಕೆ ಪಡೆಯಲಿದ್ದಾರೆ. ಆ ಬಳಿಕ ಮುಂದಿನ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

‘ಕಾರ್ತಿಕ್, ನಿತಿನ್, ಮಧು, ಫಾರೂಕ್, ಆಂಜನೇಯ, ಮದನ್, ಮಧು ಮತ್ತು ಚಂದನ್ ಎಂಬುವವರು ಶರಣಾಗಿದ್ದಾರೆ ಎಂದು ಮಾಹಿತಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಮುಂದಿನ ತನಿಖೆ ಕೈಗೊಳ್ಳುತ್ತೇವೆ.’

‘ಕಸ್ಟಡಿಗೆ ಪಡೆದ ಬಳಿಕ ವಿಚಾರಣೆ ನಡೆಸುತ್ತೇವೆ. ಆ ಬಳಿಕ ಏನೆಲ್ಲ ನಡೆಯಿತು ಅನ್ನುವುದು ಗೊತ್ತಾಗಲಿದೆ. ಹೆಚ್ಚಿನ ಮಾಹಿತಿ ತಿಳಿದು ಬರಲಿದೆ.’

‘ಪ್ರಕರಣದ ಬಳಿಕ ಒಂದೂವರೆ ದಿನದಲ್ಲಿ ಯಾರೆಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನುವುದು ಗೊತ್ತಾಗಿದೆ. ಆ ಬಳಿಕ ಎಂಟು ಆರೋಪಿಗಳು ಚಿಕ್ಕಮಗಳೂರು ಪೊಲೀಸರ ಮುಂದೆ ಶರಣಾಗಿದ್ದಾರೆ ಅನ್ನುವುದು ಗೊತ್ತಾಗಿದೆ. ತನಿಖೆ ವೇಳೆ ಈ ಎಂಟು ಜನರ ಹೆಸರು ಬಂದಿತ್ತು.’

‘ಕಾರ್ತಿಕ್, ನಿತಿನ್ ಎಂಬುವವರು ಬಂಕ್ ಬಾಲು ಹಿಂಬಾಲಕರಾಗಿದ್ದಾರೆ. ಇವರ ವಿರುದ್ಧ ಪ್ರಕರಣಗಳಿವೆ. ಬಂಕ್ ಬಾಲು ಹತ್ಯೆ ಪ್ರಕರಣದಲ್ಲಿ ಹಂದಿ ಅಣ್ಣಿ ಭಾಗಿಯಾಗಿದ್ದ ಎಂದು ಇವರು ತಿಳಿದುಕೊಂಡು ಆತನ ಕೊಲೆ (MURDER) ಮಾಡಿರುವ ಸಾದ್ಯತೆ ಇದೆ ಎಂದು ತಿಳಿದು ಬಂದಿದೆ. ಮುಂದಿನ ತಿನಿಖೆ ನಂತರ ಉಳಿದ ಮಾಹಿತಿ ಲಭ್ಯವಾಗಲಿದೆ.’

ಇದನ್ನೂ ಓದಿ –  ಹಂದಿ ಅಣ್ಣಿ ಹತ್ಯೆ ಕೇಸ್, ರಾತ್ರೋರಾತ್ರಿ ಆರೋಪಿಗಳು ಶರಣು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment