ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 22 JUNE 2023

SHIMOGA : ವಿದ್ಯಾನಗರದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ (Railway Over Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ರಾಜ್ಯದ ಅತ್ಯಾಧುನಿಕ ವಾಯ್ಡೆಡ್‌ ಸ್ಲಾಬ್‌ ಇರುವ ಗಟ್ಟಿಮುಟ್ಟು ಮೇಲ್ಸೇತುವೆ ಇದಾಗಿದೆ.

Railway-Over-Bridge-Work-at-Vidyanagara-in-Shivamogga-city.

ರೈಲು ಬಂದು ಹೋಗುವಾಗಲೆಲ್ಲ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ವಾಹನ ಸವಾರರು ಬಹು ಹೊತ್ತು ಕಾಯಬೇಕಾಗುತ್ತಿದೆ. ಕಾಯುವಿಕೆಗೆ ಕೊನೆ ಹಾಡಲು ರೈಲ್ವೆ ಮೇಲ್ಸೇತುವೆ (Railway Over Bridge) ನಿರ್ಮಾಣ ಮಾಡಲಾಗುತ್ತಿದೆ.

ಮೇಲ್ಸೇತುವೆಯ 8 ವಿಶೇಷತೆಗಳೇನು?

POINT 1 jpgಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯು 920 ಮೀಟರ್‌ ಉದ್ದವಿದೆ. ವಿದ್ಯಾನಗರದ ಬಳಿ ವೃತ್ತಾಕಾರದಲ್ಲಿದ್ದು, ಬಿ.ಹೆಚ್‌.ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.

Railway Over Bridge in Shimoga Vidyanagara

POINT 2 jpgಭೂ ಸ್ವಾಧೀನ ತಕರಾರು ಇಲ್ಲದೆ ನಡೆಯುತ್ತಿರುವ ಕಾಮಗಾರಿ ಇದಾಗಿದೆ. ರೈಲ್ವೆ ಇಲಾಖೆಯ ಜಾಗದಲ್ಲಿಯೇ ಬಹುತೇಕ ಕಾಮಗಾರಿ ನಡೆಯುತ್ತಿದೆ. ವೃತ್ತಾಕಾರದ ಭಾಗವು ಬಿ.ಹೆಚ್‌.ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಇಲಾಖೆ ಜಾಗದಲ್ಲಿ ನಿರ್ಮಿಸಲಾಗಿದೆ.

Railway Over Bridge in Shimoga Vidyanagara

POINT 3 jpgಸೇತುವೆಯ ವೃತ್ತಾಕಾರದ ಭಾಗದಲ್ಲಿ ವಾಯ್ಡ್‌ ಸ್ಲಾಬ್‌ ತಂತ್ರಜ್ಞಾನ ಬಳಸಲಾಗಿದೆ. ಸೇತುವೆಯ ಸ್ಲಾಬ್‌ನ ಒಳಗೆ 800 ಮಿಲಿ ಮೀಟರ್‌ ಸುತ್ತಳತೆಯ 8 ಗಟ್ಟಿಮುಟ್ಟು ಪೈಪ್‌ ಅಳವಡಿಸಲಾಗಿದೆ. ಇದರಿಂದ ಕಾಂಕ್ರಿಟ್‌ ಕಡಿಮೆ ಬಳಕೆಯಾಗಿದ್ದು, ಸೇತುವೆಯ ಭಾರವು ಕಡಿಮೆಯಾಗಿದೆ. ಅಲ್ಲದೆ ಗಟ್ಟಿಮುಟ್ಟಾಗಿಯು ಉಳಿಯಲಿದೆ.

Railway Over Bridge in Shimoga Vidyanagara

POINT 4 jpgಈ ಸೇತುವೆಗೆ 17 ಪಿಲ್ಲರ್‌ಗಳಿವೆ. ರೈಲ್ವೆ ಹಳಿಯಿಂದ ಹೊಳೆಹೊನ್ನೂರು ಭಾಗದಲ್ಲಿ ಎತ್ತರದ ಪಿಲ್ಲರ್‌ಗಳನ್ನು ನಿರ್ಮಿಸಲಾಗಿದೆ. ವಿದ್ಯಾನಗರದ ಕಡೆ ಕಡಿಮೆ ಎತ್ತರದ ಪಿಲ್ಲರ್‌ಗಳಿವೆ.

Railway Over Bridge in Shimoga Vidyanagara

POINT 5 jpgಮೇಲ್ಸೇತುವೆಯ ಒಂದು ಭಾಗದಲ್ಲಿ ಫುಟ್‌ಪಾತ್‌ ನಿರ್ಮಿಸಲಾಗಿದೆ. ಪಾದಚಾರಿಗಳು ರಸ್ತೆಯ ಮೇಲೆ ಬಾರದಂತೆ ತಡೆಯಲು ಎತ್ತರದ ತಡೆಗೋಡೆ ನಿರ್ಮಿಸಲಾಗಿದೆ.

Railway Over Bridge in Shimoga Vidyanagara

POINT 6 jpgಮೇಲ್ಸೇತುವೆಯು 13.5 ಮೀಟರ್‌ ಅಗಲವಾಗಿರಲಿದೆ. ಫುಟ್‌ಪಾತ್‌ ಹೊರತು ರಸ್ತೆಯು 9.5 ಮೀಟರ್‌ ಅಗಲವಾಗಲಿದೆ. ವೃತ್ತಾಕಾರದ ಭಾಗದಲ್ಲಿ ವಾಹನಗಳು ತಿರುಗಲು ಅನುಕೂಲವಾಗಲಿ ಎಂದು 11.5 ಮೀಟರ್‌ ಅಗಲ ಮಾಡಲಾಗಿದೆ.

Railway Over Bridge in Shimoga Vidyanagara

POINT 7 jpgಮೇಲ್ಸೇತುವೆಯಿಂದ ಬಿ.ಹೆಚ್‌.ರಸ್ತೆಗೆ ವಾಹನಗಳು ಏಕಾಏಕಿ ನುಗ್ಗಲಿವೆ. ಇದನ್ನು ತಡೆಯಲು ಮತ್ತು ಬಿ.ಹೆಚ್‌.ರಸ್ತೆಯಲ್ಲಿ ಬರುವ ವಾಹನ ಸವಾರರಿಗೆ ಗೊಂದಲ ಆಗದಂತೆ ನೋಡಿಕೊಳ್ಳಲು ವಿಶೇಷ ವಿನ್ಯಾಸದ ವ್ಯವಸ್ಥೆ ಮಾಡಲಾಗುತ್ತಿದೆ.

Railway Over Bridge in Shimoga Vidyanagara

POINT 8 jpgವೃತ್ತಾಕಾರದ ಸೇತುವೆ ಕೆಳಗೆ ಜಾಗ ಖಾಲಿ ಉಳಿಯಲಿದೆ. ಇಲ್ಲಿ ಪುಟ್ಟದೊಂದ ಪಾರ್ಕ್‌, ವಾಕಿಂಗ್‌ ಪಾಥ್‌ ಮಾದರಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Railway Over Bridge in Shimoga Vidyanagara - BY Raghavendra Visit

ಸಂಸದ ರಾಘವೇಂದ್ರ ಪರಿಶೀಲನೆ

ಅತ್ಯಾಧುನಿಕ ವೃತ್ತಾಕಾರದ ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಇತ್ತೀಚೆಗೆ ಪರಿಶೀಲನೆ ನಡೆಸಿದರು. ಸೇತುವೆ ಮೇಲ್ಭಾಗದವರೆಗೆ ತೆರಳಿ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

Railway Over Bridge in Shimoga Vidyanagara - BY Raghavendra Visit

ಲಕ್ನೋದಿಂದ ಪರಿಶೀಲನೆಗೆ ಅಧಿಕಾರಿಗಳು

ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಪರಿಶೀಲನೆಗೆ ಲಕ್ನೋದಿಂದ ರೈಲ್ವೆ ಅಧಿಕಾರಿಗಳು, ತಜ್ಞರ ತಂಡ ಆಗಮಿಸಲಿದೆ. ಕಾಮಗಾರಿಯ ಪ್ರತಿ ಹಂತದಲ್ಲೂ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈಗ ರೈಲ್ವೆ ಹಳಿ ಹಾದು ಹೋಗಿರುವ ಮೇಲ್ಭಾಗದಲ್ಲಿ ವಿಶೇಷ ವಿನ್ಯಾಸದ ಕಬ್ಬಿಣ್ಣದ ತಡೆಗೋಡೆ ಮಾದರಿಯನ್ನು ಅಳವಡಿಸಲಾಗುತ್ತಿದೆ. ಇದರ ಪರಿಶೀಲನೆಗೆ ಲಕ್ನೋದಿಂದ ರೈಲ್ವೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 22, 2023

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment