ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 MAY 2024
SHIMOGA : ಶಿಕ್ಷಕಿಯೊಬ್ಬರ ಬ್ಯಾಂಕ್ ಖಾತೆಯಿಂದ ಏಕಾಏಕಿ 7 ಲಕ್ಷ ರೂ. ಹಣ ನಾಪತ್ತೆಯಾಗಿದೆ. ಹಣ ಕಡಿತದ ಸಾಲು ಸಾಲು ಮೆಸೇಜ್ ಬಂದಾಗ ಶಿಕ್ಷಕಿ ಆಘಾತಕ್ಕೊಂಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಏನಿದು ಕೇಸ್? ಹಣ ಕಡಿತವಾಗಿದ್ದೇಕೆ?
ಶಿವಮೊಗ್ಗದ ಶಿಕ್ಷಕಿಯೊಬ್ಬರು ಯುನಿಯನ್ ಬ್ಯಾಂಕ್ನಲ್ಲಿ ಖಾತೆ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಹೊಂದಿದ್ದಾರೆ. ಮೇ 3ರಂದು ಮಧ್ಯಾಹ್ನ ಶಿಕ್ಷಕಿಯ ಮೊಬೈಲ್ಗೆ ಯುನಿಯನ್ ಬ್ಯಾಂಕ್ನಿಂದ ಸಾಲು ಸಾಲು ಮೆಸೇಜ್ ಬಂದಿವೆ. ಒಮ್ಮೆ 3 ಲಕ್ಷ, ಎರಡನೇ ಬಾರಿ 2 ಲಕ್ಷ, ಮೂರನೆ ಬಾರಿ 2 ಲಕ್ಷ ರೂ. ಹಣ ಕಡಿತವಾಗಿದೆ ಎಂದು ಮೆಸೇಜ್ನಲ್ಲಿ ತಿಳಿಸಲಾಗಿತ್ತು. ಕೂಡಲೆ ಹೆಲ್ಪ್ಲೈನ್ ನಂಬರ್ಗೆ ಕರೆ ಮಾಡಿದಾಗ, ನಿಮ್ಮ ಖಾತೆಯಲ್ಲಿರುವ ಉಳಿಕೆ ಹಣವನ್ನು ಕೂಡಲೆ ಬೇರೆ ಖಾತೆ ವರ್ಗಾಯಿಸಿ ಎಂದು ಸೂಚಿಸಿದ್ದರು.
ಶಿಕ್ಷಕಿ ಕೂಡಲೆ ತಮ್ಮ ಖಾತೆಯಲ್ಲಿದ್ದ ಉಳಿಕೆ ಹಣದ ಪೈಕಿ 50 ಸಾವಿರ ರೂ. ಅನ್ನು ಮಗಳ ಖಾತೆಗೆ ವರ್ಗಾಯಿಸಿದ್ದರು. ಬ್ಯಾಂಕ್ನಲ್ಲಿ ವಿಚಾರಿಸಿದಾಗ ಶಿಕ್ಷಕಿಯ ವೈಯಕ್ತಿಕ ಮಾಹಿತಿ ಕದ್ದು, ಒಟಿಪಿ ಶೇರ್ ಮಾಡದೆ 7 ಲಕ್ಷ ರೂ. ಹಣವನ್ನು ಬೇರೆ ಬೇರೆ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಈ ಸಂಬಂಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಬೆಳಗೆದ್ದು ಮನೆ ಪಕ್ಕದ ಗೋಡನ್ಗೆ ಹೋದವರಿಗೆ ಕಾದಿತ್ತು ಆಘಾತ, ಒಂದೇ ರೀತಿ ಎರಡು ಪ್ರತ್ಯೇಕ ಪ್ರಕರಣ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






